ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

ಧರ್ಮಸ್ಥಳ: ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ಯುವಕ ಸಾವನ್ನಪ್ಪಿದ್ದ ಘಟನೆ ಜ.16 ರಂದು ತಡರಾತ್ರಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(23ವ. ) ಮೃತಪಟ್ಟ ಯುವಕ.

ಸಮಾರಂಭದ ಕಾರ್ಯಕ್ರಮಕ್ಕೆಂದು ಮಂಗಳೂರಿನಿಂದ ಬೈಕ್ ನಲ್ಲಿ ಬರುತ್ತಿರುವ ವೇಳೆ ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ರೋಡಿಗೆ ಬಿದ್ದು ತಲೆಭಾಗಕ್ಕೆ ಗಂಭೀರ ಗಾಯವಾಗಿದ್ದು, ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಖಾಸಗಿ ಬಸ್‌ ಮತ್ತು ಆಟೋ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ತಂದೆ ನಾರಾಯಣ ಪೂಜಾರಿ , ತಾಯಿ , ಸಹೋದರಿಯನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಭಾರತ್ ಜೋಡೋ ಯುವ ಸಂಘದ ಉಸ್ತುವಾರಿಗಳ ನೇಮಕ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
error: Content is protected !!