September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಕಲ್ಮಂಜ: ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟ ಕಲ್ಮಂಜ(ರಿ). ಇದರ ವಾರ್ಷಿಕ ಮಹಾಸಭೆ ಜ.17 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶೋಭ ವಹಿಸಿದ್ದರು. ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಜೀವಿನಿ ಸದಸ್ಯರು ಪ್ರಾರ್ಥನೆಯೊಂದಿಗೆ ವಲಯ ಮೇಲ್ವಿಚಾರಕ ಜಯಾನಂದ್ ಸಂಜೀವಿನಿ ಯೋಜನೆಯ ಸವಿಸ್ತಾರವಾದ ಮಾಹಿತಿಯನ್ನು ಸದಸ್ಯರಿಗೆ ನೀಡಿದರು.

ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಂಜೀವಿನಿಯಿಂದ ಪಿಎಂಎಫ್ ಎಮ್ ಇ‌‌ ಮತ್ತು ‌ಸಿಐಎಫ್ ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿರುವ ಸದಸ್ಯೆಯನ್ನು ಸನ್ಮಾನಿಸಲಾಯಿತು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ವಲಯ ಮೇಲ್ವಿಚಾರಕರನ್ನು ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ಎರೆಹುಳ ಗೊಬ್ಬರವನ್ನು ಉತ್ಪಾದಕರ ಗುಂಪಿನಿಂದ ಸ್ಕಂದ ಸಂಜೀವಿನಿ ಎಂಬ ಹೆಸರಿನಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು. ಸದಸ್ಯರು ಬೆಳೆದ ತರಕಾರಿ ಗಳನ್ನು ‌ಮಾರಾಟಕ್ಕೆ ಇಡಲಾಯಿತು. ಒಕ್ಕೂಟದ ವತಿಯಿಂದ ಸಂಜೀವಿನಿ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ನಂತರ ಒಕ್ಕೂಟದ ವಾರ್ಷಿಕ ವರದಿ ಜಮಾ ಖರ್ಚು ವಿವರವನ್ನು ಎಂಬಿಕೆ ಓದಿ ಹೇಳಿ ಅನುಮೋದನೆ ಪಡೆಯಲಾಯಿತು.

ಮಹಾಸಭೆಯಲ್ಲಿ ಲಕ್ಕಿ ಮಹಿಳೆಯನ್ನು ಗುರುತಿಸಿ ಬಹುಮಾನ ನೀಡಲಾಯಿತು. ಸಂಘದ ಸದಸ್ಯರು ಹಾಡು ನೃತ್ಯವನ್ನು ಮಾಡಿದರು. ನಂತರ ಪದಗ್ರಹಣ ಕಾರ್ಯಕ್ರಮವನ್ನು ನಡೆಸಲಾಯಿತು. ಹಳೆ ಸದಸ್ಯರಿಗೆ ಕಿರು ಕಾಣಿಕೆ ನೀಡಿ ಬೀಳ್ಕೊಡಲಾಯಿತು. ಶಿವಾನಿ ಸಂಜೀವಿನಿ ಸದಸ್ಯೆ ಶ್ರೀಮತಿ ಮಮತಾ ಸ್ವಾಗತಿಸಿ, ಪ್ರಸಿದ್ಧಿ ಸಂಜೀವಿನಿ ಸದಸ್ಯೆ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ದೀಪ ಸಂಜೀವಿನಿ ಸದಸ್ಯೆ ಶ್ರೀಮತಿ ಶುಭ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya
error: Content is protected !!