32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

ಬೆಳ್ತಂಗಡಿ: ಕೇಂದ್ರ ಜುಮ್ಮಾ ಮಸ್ಜಿದ್ -ಗುರುವಾಯನಕೆರೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿ.ಕೆರೆ ಬ್ರಾಂಚ್ ಸಮಿತಿ, ತಾಜುಲ್ ಹುದಾ ಯಂಗ್ ಮೆನ್ಸ್ ಕೊಂಟು ಪಲ್ಕೆ, ಬ್ಲಡ್ ಡೊನರ್ಸ್ ಮಂಗಳೂರು(ರಿ), ಹೈದರ್ ನಿರ್ಸಾಲ್ ಬ್ಲಡ್ ಡೋನರ್ಸ್ ಪೋರಮ್ ಬೆಳ್ತಂಗಡಿ ಹಾಗೂ ಬ್ಲಡ್ ಬ್ಯಾಂಕ್ ವೆನ್ಲಾಕ್ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಗುರುವಾಯನಕೆರೆ ಶಾದಿ ಮಹಲ್ ನಲ್ಲಿ ಬೃಹತ್‌ ರಕ್ತದಾನ ಶಿಬಿರ ಜ.17ರಂದು ನಡೆಯಿತು.

ರಕ್ತದಾನ ಶಿಬಿರ ಉದ್ಘಾಟಿಸಿ ಗುರುವಾಯನಕೆರೆ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಸೀದಿ ಖತೀಬರಾದ ಎ.ಕೆ ರಝಾ ಅಮ್ಮದಿ, ಬ್ಲಡ್ ಬ್ಯಾಂಕ್ ಅಧಿಕಾರಿ ಆಂಟೋನಿ, SDPI ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರ್, ಕಾರ್ಯದರ್ಶಿ ಅಶ್ರಫ್ ತಲಪಾಡಿ, ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕುವೆಟ್ಟು ಗ್ರಾಮ ಪಂಚಾಯತ್ ಪಂ. ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್, ಮನ್ ಶಾರ್ ಅಕಾಡೆಮಿ ಗೇರುಕಟ್ಟೆ ಪ್ರಾಂಶುಪಾಲರಾದ ಹೈದರ್ ಮರ್ಧಾಳ, CRP ರಾಜೇಶ್, ಹಸೈನಾರ್ ಶಾಫಿ, ಅಬ್ದುಲ್ ರಹಮಾನ್ ಹಾಜಿ, ನಿಝರ್ ಕೆ.ಪಿ, ಅಬ್ದುಲ್ ಹಕೀಮ್ ಸುನ್ನತ್ ಕೆರೆ, ಯಾಕೂಬ್ ಮುಸ್ಲಿಯಾರ್, ಉಮರ್ ಮಟನ್, ಕಲಂದರ್ ಬಿ ಎಚ್, ಕುವೆಟ್ಟು ಪಂಚಾಯತ್ ಸದಸ್ಯರಾದ ಮುಸ್ತಾಫ ಜಿ. ಕೆರೆ, ರಿಯಾಝ್, ಸಯ್ಯದ್, ದಾವೂದ್ ಜಿ.ಕೆ ಆಗಮಿಸಿದ್ದರು.

ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು 73 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related posts

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya
error: Content is protected !!