22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

ಬೆಳ್ತಂಗಡಿ: ಕೇಂದ್ರ ಜುಮ್ಮಾ ಮಸ್ಜಿದ್ -ಗುರುವಾಯನಕೆರೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿ.ಕೆರೆ ಬ್ರಾಂಚ್ ಸಮಿತಿ, ತಾಜುಲ್ ಹುದಾ ಯಂಗ್ ಮೆನ್ಸ್ ಕೊಂಟು ಪಲ್ಕೆ, ಬ್ಲಡ್ ಡೊನರ್ಸ್ ಮಂಗಳೂರು(ರಿ), ಹೈದರ್ ನಿರ್ಸಾಲ್ ಬ್ಲಡ್ ಡೋನರ್ಸ್ ಪೋರಮ್ ಬೆಳ್ತಂಗಡಿ ಹಾಗೂ ಬ್ಲಡ್ ಬ್ಯಾಂಕ್ ವೆನ್ಲಾಕ್ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಗುರುವಾಯನಕೆರೆ ಶಾದಿ ಮಹಲ್ ನಲ್ಲಿ ಬೃಹತ್‌ ರಕ್ತದಾನ ಶಿಬಿರ ಜ.17ರಂದು ನಡೆಯಿತು.

ರಕ್ತದಾನ ಶಿಬಿರ ಉದ್ಘಾಟಿಸಿ ಗುರುವಾಯನಕೆರೆ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಸೀದಿ ಖತೀಬರಾದ ಎ.ಕೆ ರಝಾ ಅಮ್ಮದಿ, ಬ್ಲಡ್ ಬ್ಯಾಂಕ್ ಅಧಿಕಾರಿ ಆಂಟೋನಿ, SDPI ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರ್, ಕಾರ್ಯದರ್ಶಿ ಅಶ್ರಫ್ ತಲಪಾಡಿ, ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕುವೆಟ್ಟು ಗ್ರಾಮ ಪಂಚಾಯತ್ ಪಂ. ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್, ಮನ್ ಶಾರ್ ಅಕಾಡೆಮಿ ಗೇರುಕಟ್ಟೆ ಪ್ರಾಂಶುಪಾಲರಾದ ಹೈದರ್ ಮರ್ಧಾಳ, CRP ರಾಜೇಶ್, ಹಸೈನಾರ್ ಶಾಫಿ, ಅಬ್ದುಲ್ ರಹಮಾನ್ ಹಾಜಿ, ನಿಝರ್ ಕೆ.ಪಿ, ಅಬ್ದುಲ್ ಹಕೀಮ್ ಸುನ್ನತ್ ಕೆರೆ, ಯಾಕೂಬ್ ಮುಸ್ಲಿಯಾರ್, ಉಮರ್ ಮಟನ್, ಕಲಂದರ್ ಬಿ ಎಚ್, ಕುವೆಟ್ಟು ಪಂಚಾಯತ್ ಸದಸ್ಯರಾದ ಮುಸ್ತಾಫ ಜಿ. ಕೆರೆ, ರಿಯಾಝ್, ಸಯ್ಯದ್, ದಾವೂದ್ ಜಿ.ಕೆ ಆಗಮಿಸಿದ್ದರು.

ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು 73 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related posts

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya
error: Content is protected !!