July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

ಧರ್ಮಸ್ಥಳ: ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ಯುವಕ ಸಾವನ್ನಪ್ಪಿದ್ದ ಘಟನೆ ಜ.16 ರಂದು ತಡರಾತ್ರಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(23ವ. ) ಮೃತಪಟ್ಟ ಯುವಕ.

ಸಮಾರಂಭದ ಕಾರ್ಯಕ್ರಮಕ್ಕೆಂದು ಮಂಗಳೂರಿನಿಂದ ಬೈಕ್ ನಲ್ಲಿ ಬರುತ್ತಿರುವ ವೇಳೆ ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ರೋಡಿಗೆ ಬಿದ್ದು ತಲೆಭಾಗಕ್ಕೆ ಗಂಭೀರ ಗಾಯವಾಗಿದ್ದು, ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಖಾಸಗಿ ಬಸ್‌ ಮತ್ತು ಆಟೋ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ತಂದೆ ನಾರಾಯಣ ಪೂಜಾರಿ , ತಾಯಿ , ಸಹೋದರಿಯನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya
error: Content is protected !!