24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

ಬೆಳ್ತಂಗಡಿ: ಕೇಂದ್ರ ಜುಮ್ಮಾ ಮಸ್ಜಿದ್ -ಗುರುವಾಯನಕೆರೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿ.ಕೆರೆ ಬ್ರಾಂಚ್ ಸಮಿತಿ, ತಾಜುಲ್ ಹುದಾ ಯಂಗ್ ಮೆನ್ಸ್ ಕೊಂಟು ಪಲ್ಕೆ, ಬ್ಲಡ್ ಡೊನರ್ಸ್ ಮಂಗಳೂರು(ರಿ), ಹೈದರ್ ನಿರ್ಸಾಲ್ ಬ್ಲಡ್ ಡೋನರ್ಸ್ ಪೋರಮ್ ಬೆಳ್ತಂಗಡಿ ಹಾಗೂ ಬ್ಲಡ್ ಬ್ಯಾಂಕ್ ವೆನ್ಲಾಕ್ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಗುರುವಾಯನಕೆರೆ ಶಾದಿ ಮಹಲ್ ನಲ್ಲಿ ಬೃಹತ್‌ ರಕ್ತದಾನ ಶಿಬಿರ ಜ.17ರಂದು ನಡೆಯಿತು.

ರಕ್ತದಾನ ಶಿಬಿರ ಉದ್ಘಾಟಿಸಿ ಗುರುವಾಯನಕೆರೆ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಸೀದಿ ಖತೀಬರಾದ ಎ.ಕೆ ರಝಾ ಅಮ್ಮದಿ, ಬ್ಲಡ್ ಬ್ಯಾಂಕ್ ಅಧಿಕಾರಿ ಆಂಟೋನಿ, SDPI ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರ್, ಕಾರ್ಯದರ್ಶಿ ಅಶ್ರಫ್ ತಲಪಾಡಿ, ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕುವೆಟ್ಟು ಗ್ರಾಮ ಪಂಚಾಯತ್ ಪಂ. ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್, ಮನ್ ಶಾರ್ ಅಕಾಡೆಮಿ ಗೇರುಕಟ್ಟೆ ಪ್ರಾಂಶುಪಾಲರಾದ ಹೈದರ್ ಮರ್ಧಾಳ, CRP ರಾಜೇಶ್, ಹಸೈನಾರ್ ಶಾಫಿ, ಅಬ್ದುಲ್ ರಹಮಾನ್ ಹಾಜಿ, ನಿಝರ್ ಕೆ.ಪಿ, ಅಬ್ದುಲ್ ಹಕೀಮ್ ಸುನ್ನತ್ ಕೆರೆ, ಯಾಕೂಬ್ ಮುಸ್ಲಿಯಾರ್, ಉಮರ್ ಮಟನ್, ಕಲಂದರ್ ಬಿ ಎಚ್, ಕುವೆಟ್ಟು ಪಂಚಾಯತ್ ಸದಸ್ಯರಾದ ಮುಸ್ತಾಫ ಜಿ. ಕೆರೆ, ರಿಯಾಝ್, ಸಯ್ಯದ್, ದಾವೂದ್ ಜಿ.ಕೆ ಆಗಮಿಸಿದ್ದರು.

ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು 73 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related posts

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಓಡಿಲ್ನಾಳ ಬಂಟರ ಸಂಘದ ಸಮಾಲೋಚನೆ ಸಭೆ ಹಾಗೂ ಗ್ರಾಮ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya
error: Content is protected !!