September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ಮತ್ತು ಬಿಸಿನೀರಿನ ವ್ಯವಸ್ಥೆಯ ಯಂತ್ರವನ್ನು ಮೊಗ್ರು ಗ್ರಾಮದ ಪರಾರಿ ಮನೆ ಶ್ರೀಮತಿ ಜಯಂತಿ ಮತ್ತು ಸುಂದರಗೌಡ ಮತ್ತು ಮಕ್ಕಳು ಕೊಡುಗೆಯಾಗಿ ನೀಡಿರುತ್ತಾರೆ.

ಈ ನೀರಿನ ಘಟಕವನ್ನು ಜ 14 ಮಕರಸಂಕ್ರಮಣ ದಿನ ಮುಗೇರಡ್ಕ ದೈವಸ್ಥಾನದ ಗುತ್ತು ಮನೆಯ ಡಿ ರಾಮಣ್ಣ ಗೌಡ ಇವರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಮನೋಹರ್ ಅಂತರ, ಜಯಂತಿ ಮತ್ತು ಸುಂದರ ಗೌಡ ಪರಾರಿ ಮನೆ, ಸಹೋದರರಾದ ಸಾಂತಪ್ಪ ಗೌಡ ಮುಗೇರಡ್ಕ, ಚಂದ್ರಶೇಖರ ಮುಗೇರಡ್ಕ, ಸುಧಾಕರ್ ಗೌಡ ನೈಮಾರು , ರಾಮಣ್ಣ ಗೌಡ ಎರ್ಮಲ, ಕೇಶವ ಗೌಡ ಜಾಲ್ನಡೆ, ವೀರಪ್ಪ ಗೌಡ, ಕಿನ್ಯಣ್ಣ ಬರುಂಗುಡೆಲು , ಚಂದಪ್ಪ ದoಬೆತ್ತಿಮಾರು ಕೊರಗಪ್ಪ ಗೌಡ ಪುಣ್ಕೆತಡಿ, ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ದoಬೆತ್ತಿಮಾರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಂಗಳೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ: ಯುವ ಘಟಕದ ಅಧ್ಯಕ್ಷರಾಗಿ ರಕ್ಷಿತ್ ಪುತ್ತಿಲ, ಕಾರ್ಯದರ್ಶಿಯಾಗಿ ಚೇತನ್ ಕೊಕ್ಕಡ ಆಯ್ಕೆ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!