25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೈನ ಸಮುದಾಯದಿಂದ ಮನವಿಯನ್ನು ನೀಡಲಾಯಿತು.

ಪ್ರಮುಖವಾಗಿ ದ. ಕ. ಜಿಲ್ಲೆಯಲ್ಲಿ ಸಸ್ಯಹಾರಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ, ಜೈನ ಪುರೋಹಿತರಿಗೆ ಗೌರವಧನ ನೀಡುವ ಬಗ್ಗೆ, ಬಸದಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಬಗ್ಗೆ, ಬಸದಿಗಳಿಗೆ ಸೋಲಾರ್ ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ, ಜೈನ್ ಸಮುದಾಯದ ಸ್ಮಶಾನ ಅಭಿವೃದ್ಧಿ ವಸತಿ ರಹಿತ ಸಮುದಾಯದವರಿಗೆ ಅನುದಾನ ನೀಡುವ ಬಗ್ಗೆ ಮುಂತಾದ ಹಲವಾರು ಬೇಡಿಕೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್, ಅರಿಹಂತ ಜೈನ್ ಅಳದಂಗಡಿ, ನೇಮಿರಾಜ್ ಜೈನ್ ಕಾರ್ಕಳ, ಪುಷ್ಪರಾಜ್ ಜೈನ್ ಮಂಗಳೂರು, ರತ್ನಾಕರ್ ಜೈನ್ ಮಂಗಳೂರು ಉಪಸ್ಥಿತರಿದ್ದರು.

Related posts

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya
error: Content is protected !!