September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೈನ ಸಮುದಾಯದಿಂದ ಮನವಿಯನ್ನು ನೀಡಲಾಯಿತು.

ಪ್ರಮುಖವಾಗಿ ದ. ಕ. ಜಿಲ್ಲೆಯಲ್ಲಿ ಸಸ್ಯಹಾರಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ, ಜೈನ ಪುರೋಹಿತರಿಗೆ ಗೌರವಧನ ನೀಡುವ ಬಗ್ಗೆ, ಬಸದಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಬಗ್ಗೆ, ಬಸದಿಗಳಿಗೆ ಸೋಲಾರ್ ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ, ಜೈನ್ ಸಮುದಾಯದ ಸ್ಮಶಾನ ಅಭಿವೃದ್ಧಿ ವಸತಿ ರಹಿತ ಸಮುದಾಯದವರಿಗೆ ಅನುದಾನ ನೀಡುವ ಬಗ್ಗೆ ಮುಂತಾದ ಹಲವಾರು ಬೇಡಿಕೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್, ಅರಿಹಂತ ಜೈನ್ ಅಳದಂಗಡಿ, ನೇಮಿರಾಜ್ ಜೈನ್ ಕಾರ್ಕಳ, ಪುಷ್ಪರಾಜ್ ಜೈನ್ ಮಂಗಳೂರು, ರತ್ನಾಕರ್ ಜೈನ್ ಮಂಗಳೂರು ಉಪಸ್ಥಿತರಿದ್ದರು.

Related posts

ಪಟ್ರಮೆ: ಲಕ್ಷ್ಮಣ ಗೌಡ ನಿಧನ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ಕರಾಯ ಮಸೀದಿ ಬಳಿ ಮೋರಿ ಕುಸಿತ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!