23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ಸಂಭ್ರಮವು ಜ. 24ರಿಂದ ಆರಂಭಗೊಂಡು ಫೆಬ್ರವರಿ 2 ರ ವರೆಗೆ ನಡೆಯಲಿದ್ದು, ಇದರ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು ಪೊಲೀಸ್ ಅಧಿಕಾರಿಗಳ ವಿಶೇಷ ಸಭೆಯು ಜ. 17ರಂದು ಕಾಜೂರಿನ ಆಡಳಿತ ಕಚೇರಿಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅವರು ಮಾತನಾಡಿ, ಕಾಜೂರು ಉರೂಸ್ ಸಂಭ್ರಮಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಅಲ್ಲದೆ ಕೇರಳ, ತಮಿಳುನಾಡು ಮೊದಲಾದೆಡೆಗಳಿಂದಲೂ ಅನೇಕ ಭಕ್ತರು ಜಾತಿ ಧರ್ಮದ ಭೇದವಿಲ್ಲದೆ ಆಗಮಿಸುತ್ತಾರೆ. ಅವರಿಗೆ ತೊಂದರೆಯಾಗದ ರೀತಿಯಲ್ಲಿ ನಾವು ವ್ಯವಸ್ಥೆ ರೂಪಿಸಲಿದ್ದೇವೆ. ಈ‌ ವೇಳೆ ಪೊಲೀಸ್ ಇಲಾಖೆಯಿಂದಲೂ ನಮಗೆ ಹೆಚ್ಚಿನ ಸಹಕಾರ ಬೇಕಾಗಿದೆ ಎಂದರು.


ಸಭೆ ನಡೆಸಿಕೊಟ್ಟ ಬೆಳ್ತಂಗಡಿ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ ಸುಬ್ಬಾಪುರಮಠ್ ಅವರು ಮಾತನಾಡಿ, ಕಾಜೂರು ಕ್ಷೇತ್ರದ ಬಗ್ಗೆ ಅನೇಕ ಕಡೆಗಳಲ್ಲಿ ಪಸಿದ್ಧಿ ಇರುವುದನ್ನು ನಾನು ಮನಗಂಡಿದ್ದೇನೆ. ಇಲ್ಲಿನ ಅಭಿಮಾನಿಗಳು ಹಾಗೂ ಭಕ್ತರು ಇರುವುದನ್ನೂ ನಾನು ಕೇಳಿ ತಿಳಿದುಕೊಂಡಿದ್ದೇನೆ.


ಇಲ್ಲಿನ ಉರೂಸ್ ಕಾರ್ಯಕ್ರಮ ಸುಸೂತ್ರವಾಗಿ ನಡೆಯಬೇಕಾಗಿದೆ. ಅದಕ್ಕೆ ಪೊಲೀಸ್ ಇಲಾಖೆ ಕಡೆಯಿಂದ ಹೆಚ್ಚಿನ ಕಾಳಜಿ ವಹಿಸಲಾಗುವುದು. ಸಮಿತಿ ಮತ್ತು‌ ಈ ಊರಿನವರ ಸಹಕಾರ ಇದ್ದರೆ ಮಾತ್ರ ಈ ಕಾರ್ಯ ಯಶಸ್ವಿಯಾಗಿ ಮಾಡಬಹುದು. ಒಟ್ಟಿನಲ್ಲಿ ಈ ವರ್ಷದ ಉರೂಸ್ ಕಾರ್ಯಕ್ರಮಗಳನ್ನು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹಳಿ ತಪ್ಪದಂತೆ ನಾವೆಲ್ಲ ನಡೆಸಿಕೊಡೋಣ ಎಂದರು.


ಈ ಸಂದರ್ಭ ಉರೂಸ್ ಸಮಿತಿ ವತಿಯಿಂದ ಇನ್ಸ್‌ಪೆಕ್ಟರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಉರೂಸ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು, ಜಿಲ್ಲಾ ವಕಫ್ ಸಲಹಾ ಸಮಿತಿ ಸದಸ್ಯರು, ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯೂ ಆದ ಜೆ‌.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಜೊತೆ ಕಾರ್ಯದರ್ಶಿ ಶಾಹುಲ್ ಹಮೀದ್ ಕಿಲ್ಲೂರು, ಕೋಶಾಧಿಕಾರಿ ಕೆ.ಎಮ್ ಕಮಾಲ್ ಕಾಜೂರು, ಹಿರಿಯರಾದ ಬದ್ರುದ್ದೀನ್ ಕಾಜೂರು, ಅಬೂಬಕ್ಕರ್ ಮಲ್ಲಿಗೆಮನೆ, ಪುತ್ತುಮೋನು ಕಿಲ್ಲೂರು, ಶಾಹುಲ್ ಹಮೀದ್ ಅಮ್ಮಿ, ಎ.ಯು ಮೊಹಮ್ಮದಲಿ, ಎನ್.ಎಮ್ ಯಾಕುಬ್ ಹಾಗೂ ಕಾಜೂರು ಕಿಲ್ಲೂರು ಜಂಟಿ ಉರೂಸ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!