22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

ಬೆಳ್ತಂಗಡಿ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಲುವಾಗಿ ವಿಶೇಷ ನೋಂದಣಿ ಶಿಬಿರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಹಯೋಗದಲ್ಲಿ ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯು ಜ.20 ಸೋಮವಾರದಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದು ಅರ್ಹ ಅಭ್ಯರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮತ್ತು ಸದಸ್ಯ ಕಾರ್ಯದರ್ಶಿ ಹಾಗೂ ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

2023 ಮತ್ತು 2024ರ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮಾ ತೇರ್ಗಡೆಯಾಗಿ ನಿರುದ್ಯೋಗಿಯಾಗಿರುವವರು ಅರ್ಜಿ ಸಲ್ಲಿಸಬಹುದು.
ನೋಂದಣಿಯಾದ ಅರ್ಹ ಪದವೀಧರರಿಗೆ ಮಾಹೆಯಾನ ರೂ. 3000/- ಮತ್ತು ಡಿಪ್ಲೋಮ ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ರೂ. ಗಳನ್ನು ನಿರುದ್ಯೋಗ ಭತ್ಯೆಯಾಗಿ ನೇರ ನಗದು ವರ್ಗಾವಣೆ ಮೂಲಕ ಪಾವತಿ ಮಾಡಲಾಗುವುದು.

ನೋಂದಣಿ ಮಾಡಿಸಲು ಅಗತ್ಯವಿರುವ ದಾಖಲೆ ವಿವರಗಳು

  • ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ( ಮೊಬೈಲ್ ಫೋನ್)
  • ಇಮೇಲ್ ಐ ಡಿ
  • ಎಸ್ ಎಸ್ ಲ್ ಸಿ, ಪಿ ಯು ಸಿ, ಪದವಿ/ ಡಿಪ್ಲೋಮ/ ಸ್ನಾತಕೋತ್ತರ ಒರಿಜಿನಲ್ ಸರ್ಟಿಫಿಕೇಟ್
  • ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು
  • ಆಧಾರ್ ಕಾರ್ಡ್ ಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗಿರಬೇಕು.

Related posts

ಎಸ್ ವೈ ಎಸ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!