April 21, 2025
Uncategorized

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರು ಈ ಬಗ್ಗೆ ಕಾನೂನು ಸಚಿವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ಕೆ. ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಕೆ ಡಿ ಪಿ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್, ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೊ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೊಸರ್,ಕೋಶಾಧಿಕಾರಿ ಪ್ರಶಾಂತ್ ಎಂ. ಮಾಜಿ ಅಧ್ಯಕ್ಷರಾದ ಶಿವಕುಮಾರ್ ಎಸ್.ಎಂ, ಹಿರಿಯ ವಕೀಲರಾದ ಭಗೀರಥ, ಜಿ, ಬಿ.ಕೆ ಧನಂಜಯ ರಾವ್ ಮತ್ತು ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!