25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

ಉಜಿರೆ: ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಂತ ವೇಗವಾಗಿ ದಿನೇ ದಿನೇ ಹಲವಾರು ಬದಲಾವಣೆ, ಹೊಸ ಹೊಸ ‌ಅವಿಷ್ಕಾರಗಳು,ಸಂಶೋಧನೆಗಳು ನಡೆಯುತ್ತಿದೆ. ಡಾ.ಗೋಪಾಲಕೃಷ್ಣ ದಂಪತಿ ಹಾಗೂ ಕುಟುಂಬದ ಸದಸ್ಯರು ಗ್ರಾಮೀಣ ಭಾಗದ ಜನರಿಗೆ ಅತ್ಯುತ್ತಮ ದರ್ಜೆಯ ಆರೋಗ್ಯ ಸೇವೆ ನೀಡುತ್ತಿರುವುದು ಶ್ಲಾಘನೀಯವಾದುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಜ. 18 ರಂದು ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಡೇ-ಕೇರ್ ವಿಭಾಗದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇರವೇರಿಸಿ ಮಾತನಾಡಿ ಆಸ್ಪತ್ರೆಗೆ ಬರುವ ರೋಗಿಗಳನ್ನು ತನ್ನ ಕುಟುಂಬದ ಸದಸ್ಯರ ರೀತಿ ಆರೈಕೆ ಮಾಡುವ ಡಾ.ಗೋಪಾಲಕೃಷ್ಣ ದಂಪತಿ ಸಮಾಜಕ್ಕೆ ಪ್ರೇರಣೆ.ಎಲ್ಲಾ ಸೌಕರ್ಯಗಳನ್ನು ಹೊಂದಿರುವ ಬೆನಕ ಆಸ್ಪತ್ರೆ ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವುದು ಸಂತಸದ ವಿಚಾರ ಎಂದರು.

ಬೆನಕ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಗೋಪಾಲಕೃಷ್ಣ ಅವರ ತಂದೆ ಸೀತಾರಾಮ ಭಟ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ಕಾರಂತ ,ಉಪಾಧ್ಯಕ್ಷ ರವಿಕುಮಾ‌ರ್ ಬರೆಮೇಲು,ರಾಷ್ಟ್ರೀಯ ಆರೋಗ್ಯ ಸಂಸ್ಥೆ ರಾಜ್ಯ ನಿರ್ದೇಶಕ ಡಾ.ನವೀನ್ ಭಟ್, ಡಾ.ನಿಮಿಷಾ ಭಟ್ ಉಪಸ್ಥಿತರಿದ್ದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಿ ಶುಭ ಕೋರಿದರು.

ಉಜಿರೆ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ಡಾ. ಜಿ.ಕೆ, ಡಾ.ಆದಿತ್ಯ ರಾವ್, ಡಾ.ಅಂಕಿತಾ ಜಿ ಭಟ್, ಡಾ.ರೋಹಿತ್ ಜಿ ಭಟ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ಹಿರಿಯ ನ್ಯಾಯವಾದಿ ಧನಂಜಯ ರಾವ್ ಮತ್ತು ಬೆನಕ ಪಬ್ಲಿಕ್ ರಿಲೇಶನ್ ಆಫೀಸರ್ ಎಸ್ .ಜಿ ಭಟ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya
error: Content is protected !!