25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ಸಂಭ್ರಮವು ಜ. 24ರಿಂದ ಆರಂಭಗೊಂಡು ಫೆಬ್ರವರಿ 2 ರ ವರೆಗೆ ನಡೆಯಲಿದ್ದು, ಇದರ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು ಪೊಲೀಸ್ ಅಧಿಕಾರಿಗಳ ವಿಶೇಷ ಸಭೆಯು ಜ. 17ರಂದು ಕಾಜೂರಿನ ಆಡಳಿತ ಕಚೇರಿಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅವರು ಮಾತನಾಡಿ, ಕಾಜೂರು ಉರೂಸ್ ಸಂಭ್ರಮಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಅಲ್ಲದೆ ಕೇರಳ, ತಮಿಳುನಾಡು ಮೊದಲಾದೆಡೆಗಳಿಂದಲೂ ಅನೇಕ ಭಕ್ತರು ಜಾತಿ ಧರ್ಮದ ಭೇದವಿಲ್ಲದೆ ಆಗಮಿಸುತ್ತಾರೆ. ಅವರಿಗೆ ತೊಂದರೆಯಾಗದ ರೀತಿಯಲ್ಲಿ ನಾವು ವ್ಯವಸ್ಥೆ ರೂಪಿಸಲಿದ್ದೇವೆ. ಈ‌ ವೇಳೆ ಪೊಲೀಸ್ ಇಲಾಖೆಯಿಂದಲೂ ನಮಗೆ ಹೆಚ್ಚಿನ ಸಹಕಾರ ಬೇಕಾಗಿದೆ ಎಂದರು.


ಸಭೆ ನಡೆಸಿಕೊಟ್ಟ ಬೆಳ್ತಂಗಡಿ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ ಸುಬ್ಬಾಪುರಮಠ್ ಅವರು ಮಾತನಾಡಿ, ಕಾಜೂರು ಕ್ಷೇತ್ರದ ಬಗ್ಗೆ ಅನೇಕ ಕಡೆಗಳಲ್ಲಿ ಪಸಿದ್ಧಿ ಇರುವುದನ್ನು ನಾನು ಮನಗಂಡಿದ್ದೇನೆ. ಇಲ್ಲಿನ ಅಭಿಮಾನಿಗಳು ಹಾಗೂ ಭಕ್ತರು ಇರುವುದನ್ನೂ ನಾನು ಕೇಳಿ ತಿಳಿದುಕೊಂಡಿದ್ದೇನೆ.


ಇಲ್ಲಿನ ಉರೂಸ್ ಕಾರ್ಯಕ್ರಮ ಸುಸೂತ್ರವಾಗಿ ನಡೆಯಬೇಕಾಗಿದೆ. ಅದಕ್ಕೆ ಪೊಲೀಸ್ ಇಲಾಖೆ ಕಡೆಯಿಂದ ಹೆಚ್ಚಿನ ಕಾಳಜಿ ವಹಿಸಲಾಗುವುದು. ಸಮಿತಿ ಮತ್ತು‌ ಈ ಊರಿನವರ ಸಹಕಾರ ಇದ್ದರೆ ಮಾತ್ರ ಈ ಕಾರ್ಯ ಯಶಸ್ವಿಯಾಗಿ ಮಾಡಬಹುದು. ಒಟ್ಟಿನಲ್ಲಿ ಈ ವರ್ಷದ ಉರೂಸ್ ಕಾರ್ಯಕ್ರಮಗಳನ್ನು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹಳಿ ತಪ್ಪದಂತೆ ನಾವೆಲ್ಲ ನಡೆಸಿಕೊಡೋಣ ಎಂದರು.


ಈ ಸಂದರ್ಭ ಉರೂಸ್ ಸಮಿತಿ ವತಿಯಿಂದ ಇನ್ಸ್‌ಪೆಕ್ಟರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಉರೂಸ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು, ಜಿಲ್ಲಾ ವಕಫ್ ಸಲಹಾ ಸಮಿತಿ ಸದಸ್ಯರು, ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯೂ ಆದ ಜೆ‌.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಜೊತೆ ಕಾರ್ಯದರ್ಶಿ ಶಾಹುಲ್ ಹಮೀದ್ ಕಿಲ್ಲೂರು, ಕೋಶಾಧಿಕಾರಿ ಕೆ.ಎಮ್ ಕಮಾಲ್ ಕಾಜೂರು, ಹಿರಿಯರಾದ ಬದ್ರುದ್ದೀನ್ ಕಾಜೂರು, ಅಬೂಬಕ್ಕರ್ ಮಲ್ಲಿಗೆಮನೆ, ಪುತ್ತುಮೋನು ಕಿಲ್ಲೂರು, ಶಾಹುಲ್ ಹಮೀದ್ ಅಮ್ಮಿ, ಎ.ಯು ಮೊಹಮ್ಮದಲಿ, ಎನ್.ಎಮ್ ಯಾಕುಬ್ ಹಾಗೂ ಕಾಜೂರು ಕಿಲ್ಲೂರು ಜಂಟಿ ಉರೂಸ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ವಿ.ಪ. ಶಾಸಕ ಬಿ.ಕೆ ಹರಿಪ್ರಸಾದ್ ರವರಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಮನವಿ

Suddi Udaya
error: Content is protected !!