32.6 C
ಪುತ್ತೂರು, ಬೆಳ್ತಂಗಡಿ
June 6, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

ಬೆಳ್ತಂಗಡಿ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಲುವಾಗಿ ವಿಶೇಷ ನೋಂದಣಿ ಶಿಬಿರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಹಯೋಗದಲ್ಲಿ ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯು ಜ.20 ಸೋಮವಾರದಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದು ಅರ್ಹ ಅಭ್ಯರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮತ್ತು ಸದಸ್ಯ ಕಾರ್ಯದರ್ಶಿ ಹಾಗೂ ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

2023 ಮತ್ತು 2024ರ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮಾ ತೇರ್ಗಡೆಯಾಗಿ ನಿರುದ್ಯೋಗಿಯಾಗಿರುವವರು ಅರ್ಜಿ ಸಲ್ಲಿಸಬಹುದು.
ನೋಂದಣಿಯಾದ ಅರ್ಹ ಪದವೀಧರರಿಗೆ ಮಾಹೆಯಾನ ರೂ. 3000/- ಮತ್ತು ಡಿಪ್ಲೋಮ ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ರೂ. ಗಳನ್ನು ನಿರುದ್ಯೋಗ ಭತ್ಯೆಯಾಗಿ ನೇರ ನಗದು ವರ್ಗಾವಣೆ ಮೂಲಕ ಪಾವತಿ ಮಾಡಲಾಗುವುದು.

ನೋಂದಣಿ ಮಾಡಿಸಲು ಅಗತ್ಯವಿರುವ ದಾಖಲೆ ವಿವರಗಳು

  • ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ( ಮೊಬೈಲ್ ಫೋನ್)
  • ಇಮೇಲ್ ಐ ಡಿ
  • ಎಸ್ ಎಸ್ ಲ್ ಸಿ, ಪಿ ಯು ಸಿ, ಪದವಿ/ ಡಿಪ್ಲೋಮ/ ಸ್ನಾತಕೋತ್ತರ ಒರಿಜಿನಲ್ ಸರ್ಟಿಫಿಕೇಟ್
  • ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು
  • ಆಧಾರ್ ಕಾರ್ಡ್ ಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗಿರಬೇಕು.

Related posts

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya
error: Content is protected !!