September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

ಬೆಳ್ತಂಗಡಿ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಲುವಾಗಿ ವಿಶೇಷ ನೋಂದಣಿ ಶಿಬಿರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಹಯೋಗದಲ್ಲಿ ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯು ಜ.20 ಸೋಮವಾರದಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದು ಅರ್ಹ ಅಭ್ಯರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮತ್ತು ಸದಸ್ಯ ಕಾರ್ಯದರ್ಶಿ ಹಾಗೂ ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

2023 ಮತ್ತು 2024ರ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮಾ ತೇರ್ಗಡೆಯಾಗಿ ನಿರುದ್ಯೋಗಿಯಾಗಿರುವವರು ಅರ್ಜಿ ಸಲ್ಲಿಸಬಹುದು.
ನೋಂದಣಿಯಾದ ಅರ್ಹ ಪದವೀಧರರಿಗೆ ಮಾಹೆಯಾನ ರೂ. 3000/- ಮತ್ತು ಡಿಪ್ಲೋಮ ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ರೂ. ಗಳನ್ನು ನಿರುದ್ಯೋಗ ಭತ್ಯೆಯಾಗಿ ನೇರ ನಗದು ವರ್ಗಾವಣೆ ಮೂಲಕ ಪಾವತಿ ಮಾಡಲಾಗುವುದು.

ನೋಂದಣಿ ಮಾಡಿಸಲು ಅಗತ್ಯವಿರುವ ದಾಖಲೆ ವಿವರಗಳು

  • ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ( ಮೊಬೈಲ್ ಫೋನ್)
  • ಇಮೇಲ್ ಐ ಡಿ
  • ಎಸ್ ಎಸ್ ಲ್ ಸಿ, ಪಿ ಯು ಸಿ, ಪದವಿ/ ಡಿಪ್ಲೋಮ/ ಸ್ನಾತಕೋತ್ತರ ಒರಿಜಿನಲ್ ಸರ್ಟಿಫಿಕೇಟ್
  • ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು
  • ಆಧಾರ್ ಕಾರ್ಡ್ ಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗಿರಬೇಕು.

Related posts

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya
error: Content is protected !!