32.6 C
ಪುತ್ತೂರು, ಬೆಳ್ತಂಗಡಿ
June 6, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

ಬಳಂಜ:ಬಳಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಪುಷ್ಪಾವತಿ ಸತೀಶ್ ಪೂಜಾರಿ ಹೇವ ಅವರು ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಪೂಜಾರಿ ನಂದ್ರಟ್ಟ ನಾಲ್ಕೂರು, ನಿರ್ದೇಶಕರಾಗಿ ,ಮಾಲಿನಿ ಬಾಲಕೃಷ್ಣ ಯೈಕುರಿ, ಉಷಾ ದಿನೇಶ್ ಕುದ್ರೋಟ್ಟು, ನಂದೀನಿ ಸುರೇಶ್ ಜೈಮಾತ, ಅರುಣ ಸಂತೋಷ್ ಹೆಗ್ಡೆ ವೀರಮಾರುತಿ ಬಳಂಜ, ಜಯಶ್ರೀ ಅಶೋಕ್, ಮುಕ್ತ, ಚಂದ್ರಾವತಿ, ಜಯಶ್ರೀ ರಮೇಶ್, ಬೇಬಿ ಅಟ್ಲಾಜೆ ಆಯ್ಕೆಯಾದರು.

13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹಿಂದುಳಿದ ವರ್ಗ ಬಿ ಮತ್ತು ಪರಿಶಿಷ್ಟ ಪಂಗಡದ ಯಾವುದೇ ಅಭ್ಯರ್ಥಿಗಳು ಸ್ಪರ್ದಿಸದ ಕಾರಣ 11 ಮಂದಿ ಆಡಳಿತ ಮಂಡಳಿಗೆ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಕವಿತಾ ನಿರ್ವಹಿಸಿದರು. ಹಾಗೂ ಬಳಂಜ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಭಾರತಿ ಭಟ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!