September 6, 2026
Uncategorized

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರು ಈ ಬಗ್ಗೆ ಕಾನೂನು ಸಚಿವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ಕೆ. ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಕೆ ಡಿ ಪಿ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್, ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೊ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೊಸರ್,ಕೋಶಾಧಿಕಾರಿ ಪ್ರಶಾಂತ್ ಎಂ. ಮಾಜಿ ಅಧ್ಯಕ್ಷರಾದ ಶಿವಕುಮಾರ್ ಎಸ್.ಎಂ, ಹಿರಿಯ ವಕೀಲರಾದ ಭಗೀರಥ, ಜಿ, ಬಿ.ಕೆ ಧನಂಜಯ ರಾವ್ ಮತ್ತು ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

Related posts

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!