March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

ಕಾಯರ್ತಡ್ಡ: ಕಾಯರ್ತಡ್ಕ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೊಮ್ಸ್ ಲಿಮಿಟೆಡ್ ಸಿಎಸ್‌ಆರ್ ಫಂಡ್‌ನಿಂದ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಬೆಂಗಳೂರು ಇವರ ಸಹಯೋಗದಲ್ಲಿ ರೂ.12 ಲಕ್ಷ ಮೊತ್ತದ ಸುಸಜ್ಜಿತ ಶೌಚಾಲಯ ನಿರ್ಮಾಣ ಮಾಡಿ ಶಾಲೆಗೆ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಯಾನ್ ಫಿನ್ ಹೊಮ್ಸ್ ಲಿಮಿಟೆಡ್‌ ಡಿಜಿಎಂ ಪ್ರಶಾಂತ್ ಜೋಷಿ ಮಾತನಾಡಿ ಮಕ್ಕಳು ಶೌಚಾಲಯವನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು. ಶುಚಿತ್ವ ಕಾಪಾಡಿಕೊಂಡು ಬಂದದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಶಾಲೆಗೆ ಎರಡು ಉತ್ತಮ ಸುಸಜ್ಜಿತ ಕೊಠಡಿಗಳನ್ನು ನಿರ್ಮಾಣ ಮಾಡಿಕೊಡುತ್ತೇವೆ ಎಂದು ತಿಳಿಸಿದರು. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮಾ ಮಾತನಾಡಿ ಇಂತಹ ಸುಂದರ ಸುಸಜ್ಜಿತ ಶೌಚಾಲಯ ಯಾವ ಸರಕಾರಿ ಶಾಲೆಗಳಲ್ಲೂ ಇರುವುದಿಲ್ಲ. ನಿಮಗೆ ಆ ಸೌಭಾಗ್ಯ ಒದಗಿ ಬಂದಿದೆ.ಇದನ್ನು ಸದುಪಯೋಗ ಪಡಿಸಿಕೊಳ್ಳಿ ಓದಿನ ಕಡೆ ಹೆಚ್ಚಿನ ಗಮನ ನೀಡಿ ಎಂದು ಹೇಳಿದರು.

ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಆನಂತ್ ಭಟ್ ಮಚ್ಚಿಮಲೆ, ವಿದ್ಯಾ ಕುಮಾರ್ ಕಾಂಚೋಡು, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ್ ಗೌಡ ಹಾರಿತ್ತಕಡೆ, ಎಸ್‌ಡಿಎಂಸಿ ಉಪಾಧ್ಯಕ್ಷ ಪದ್ಮನಾಭ ಗೌಡ, ಪ್ರತಿಮಾ ಜೋಷಿ, ಅಬೂಬಕರ್, ಶ್ರೀನಾಥ್ ಕೆಎಂ ಮತ್ತು ಶ್ರವಣ್ ಕಾಂತಾಜೆ ಉಪಸ್ಥಿತರಿದ್ದರು. ಶಿಕ್ಷಕ ಸುರೇಶ ಕೆ.ಆರ್. ಸ್ವಾಗತಿಸಿ, ಮುಖ್ಯ ಶಿಕ್ಷಕ ಯಾಕೂಬ್ ಪ್ರಸ್ತಾವಿಕವಾಗಿ ಮಾತನಾಡಿ, ಶಿಕ್ಷಕಿ ಜಯಲಕ್ಷ್ಮೀ ವಂದಿಸಿದರು. ಶಿಕ್ಷಕ ಆನಂದ್ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya
error: Content is protected !!