22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

ಉಜಿರೆ: “ಬಳಸಿದಷ್ಟು ಮುಗಿಯದ ಅಕ್ಷಯಪಾತ್ರೆ ಶಿಕ್ಷಣ, ಅದರ ಸದುಪಯೋಗವನ್ನು ಪಡೆದು ಮುನ್ನುಗ್ಗಿರಿ” ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ನೂತನ ಶೈಕ್ಷಣಿಕ ಸಂಯೋಜಕರಾದ ಡಾ.ಎಸ್.ಎನ್ ಕಾಕತ್ಕರ್ ಇವರು ಹಾರೈಸಿದರು.

“ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ನೆನಪು ಶಾಶ್ವತ, ಶಿಕ್ಷಕರ ಕಾಳಜಿಯ ಒಳ ಅರ್ಥವನ್ನು ತಿಳಿದು ಮುಂದೆ ಬರುವ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಿರಿ” ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ “ಶುಭಮಸ್ತು” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಒಂಬತ್ತನೆ ತರಗತಿ ವಿದ್ಯಾರ್ಥಿಗಳು ಸಮೂಹ ಗಾಯನ, ಸಮೂಹ ನೃತ್ಯ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ ಸವಿನೆನಪುಗಳನ್ನು ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರು ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿ ಅಲ್ರಿಕ್ ಹಾಗೂ ವಿದ್ಯಾರ್ಥಿನಿ ಮಾನ್ಯ ಪೈ ಕಾರ್ಯಕ್ರಮ ನಿರೂಪಿಸಿ, ಶಾಲಾ ಪ್ರಾಂಶುಪಾಲರು ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಕಲ್ಯಾಣಿ ರಾವ್ ವಂದಿಸಿದರು.

Related posts

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರ ನೇಮಕ : ದಾಖಲೆಗಳನ್ನು ಹಾಜರು ಪಡಿಸುವಂತೆ ಹೈಕೋರ್ಟ್ ಸೂಚನೆ

Suddi Udaya

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!