April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೈನ ಸಮುದಾಯದಿಂದ ಮನವಿಯನ್ನು ನೀಡಲಾಯಿತು.

ಪ್ರಮುಖವಾಗಿ ದ. ಕ. ಜಿಲ್ಲೆಯಲ್ಲಿ ಸಸ್ಯಹಾರಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ, ಜೈನ ಪುರೋಹಿತರಿಗೆ ಗೌರವಧನ ನೀಡುವ ಬಗ್ಗೆ, ಬಸದಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಬಗ್ಗೆ, ಬಸದಿಗಳಿಗೆ ಸೋಲಾರ್ ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ, ಜೈನ್ ಸಮುದಾಯದ ಸ್ಮಶಾನ ಅಭಿವೃದ್ಧಿ ವಸತಿ ರಹಿತ ಸಮುದಾಯದವರಿಗೆ ಅನುದಾನ ನೀಡುವ ಬಗ್ಗೆ ಮುಂತಾದ ಹಲವಾರು ಬೇಡಿಕೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್, ಅರಿಹಂತ ಜೈನ್ ಅಳದಂಗಡಿ, ನೇಮಿರಾಜ್ ಜೈನ್ ಕಾರ್ಕಳ, ಪುಷ್ಪರಾಜ್ ಜೈನ್ ಮಂಗಳೂರು, ರತ್ನಾಕರ್ ಜೈನ್ ಮಂಗಳೂರು ಉಪಸ್ಥಿತರಿದ್ದರು.

Related posts

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!