37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೈನ ಸಮುದಾಯದಿಂದ ಮನವಿಯನ್ನು ನೀಡಲಾಯಿತು.

ಪ್ರಮುಖವಾಗಿ ದ. ಕ. ಜಿಲ್ಲೆಯಲ್ಲಿ ಸಸ್ಯಹಾರಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ, ಜೈನ ಪುರೋಹಿತರಿಗೆ ಗೌರವಧನ ನೀಡುವ ಬಗ್ಗೆ, ಬಸದಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಬಗ್ಗೆ, ಬಸದಿಗಳಿಗೆ ಸೋಲಾರ್ ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ, ಜೈನ್ ಸಮುದಾಯದ ಸ್ಮಶಾನ ಅಭಿವೃದ್ಧಿ ವಸತಿ ರಹಿತ ಸಮುದಾಯದವರಿಗೆ ಅನುದಾನ ನೀಡುವ ಬಗ್ಗೆ ಮುಂತಾದ ಹಲವಾರು ಬೇಡಿಕೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್, ಅರಿಹಂತ ಜೈನ್ ಅಳದಂಗಡಿ, ನೇಮಿರಾಜ್ ಜೈನ್ ಕಾರ್ಕಳ, ಪುಷ್ಪರಾಜ್ ಜೈನ್ ಮಂಗಳೂರು, ರತ್ನಾಕರ್ ಜೈನ್ ಮಂಗಳೂರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!