26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ಸಂಭ್ರಮವು ಜ. 24ರಿಂದ ಆರಂಭಗೊಂಡು ಫೆಬ್ರವರಿ 2 ರ ವರೆಗೆ ನಡೆಯಲಿದ್ದು, ಇದರ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು ಪೊಲೀಸ್ ಅಧಿಕಾರಿಗಳ ವಿಶೇಷ ಸಭೆಯು ಜ. 17ರಂದು ಕಾಜೂರಿನ ಆಡಳಿತ ಕಚೇರಿಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅವರು ಮಾತನಾಡಿ, ಕಾಜೂರು ಉರೂಸ್ ಸಂಭ್ರಮಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಅಲ್ಲದೆ ಕೇರಳ, ತಮಿಳುನಾಡು ಮೊದಲಾದೆಡೆಗಳಿಂದಲೂ ಅನೇಕ ಭಕ್ತರು ಜಾತಿ ಧರ್ಮದ ಭೇದವಿಲ್ಲದೆ ಆಗಮಿಸುತ್ತಾರೆ. ಅವರಿಗೆ ತೊಂದರೆಯಾಗದ ರೀತಿಯಲ್ಲಿ ನಾವು ವ್ಯವಸ್ಥೆ ರೂಪಿಸಲಿದ್ದೇವೆ. ಈ‌ ವೇಳೆ ಪೊಲೀಸ್ ಇಲಾಖೆಯಿಂದಲೂ ನಮಗೆ ಹೆಚ್ಚಿನ ಸಹಕಾರ ಬೇಕಾಗಿದೆ ಎಂದರು.


ಸಭೆ ನಡೆಸಿಕೊಟ್ಟ ಬೆಳ್ತಂಗಡಿ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ ಸುಬ್ಬಾಪುರಮಠ್ ಅವರು ಮಾತನಾಡಿ, ಕಾಜೂರು ಕ್ಷೇತ್ರದ ಬಗ್ಗೆ ಅನೇಕ ಕಡೆಗಳಲ್ಲಿ ಪಸಿದ್ಧಿ ಇರುವುದನ್ನು ನಾನು ಮನಗಂಡಿದ್ದೇನೆ. ಇಲ್ಲಿನ ಅಭಿಮಾನಿಗಳು ಹಾಗೂ ಭಕ್ತರು ಇರುವುದನ್ನೂ ನಾನು ಕೇಳಿ ತಿಳಿದುಕೊಂಡಿದ್ದೇನೆ.


ಇಲ್ಲಿನ ಉರೂಸ್ ಕಾರ್ಯಕ್ರಮ ಸುಸೂತ್ರವಾಗಿ ನಡೆಯಬೇಕಾಗಿದೆ. ಅದಕ್ಕೆ ಪೊಲೀಸ್ ಇಲಾಖೆ ಕಡೆಯಿಂದ ಹೆಚ್ಚಿನ ಕಾಳಜಿ ವಹಿಸಲಾಗುವುದು. ಸಮಿತಿ ಮತ್ತು‌ ಈ ಊರಿನವರ ಸಹಕಾರ ಇದ್ದರೆ ಮಾತ್ರ ಈ ಕಾರ್ಯ ಯಶಸ್ವಿಯಾಗಿ ಮಾಡಬಹುದು. ಒಟ್ಟಿನಲ್ಲಿ ಈ ವರ್ಷದ ಉರೂಸ್ ಕಾರ್ಯಕ್ರಮಗಳನ್ನು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹಳಿ ತಪ್ಪದಂತೆ ನಾವೆಲ್ಲ ನಡೆಸಿಕೊಡೋಣ ಎಂದರು.


ಈ ಸಂದರ್ಭ ಉರೂಸ್ ಸಮಿತಿ ವತಿಯಿಂದ ಇನ್ಸ್‌ಪೆಕ್ಟರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಉರೂಸ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು, ಜಿಲ್ಲಾ ವಕಫ್ ಸಲಹಾ ಸಮಿತಿ ಸದಸ್ಯರು, ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯೂ ಆದ ಜೆ‌.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಜೊತೆ ಕಾರ್ಯದರ್ಶಿ ಶಾಹುಲ್ ಹಮೀದ್ ಕಿಲ್ಲೂರು, ಕೋಶಾಧಿಕಾರಿ ಕೆ.ಎಮ್ ಕಮಾಲ್ ಕಾಜೂರು, ಹಿರಿಯರಾದ ಬದ್ರುದ್ದೀನ್ ಕಾಜೂರು, ಅಬೂಬಕ್ಕರ್ ಮಲ್ಲಿಗೆಮನೆ, ಪುತ್ತುಮೋನು ಕಿಲ್ಲೂರು, ಶಾಹುಲ್ ಹಮೀದ್ ಅಮ್ಮಿ, ಎ.ಯು ಮೊಹಮ್ಮದಲಿ, ಎನ್.ಎಮ್ ಯಾಕುಬ್ ಹಾಗೂ ಕಾಜೂರು ಕಿಲ್ಲೂರು ಜಂಟಿ ಉರೂಸ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya
error: Content is protected !!