25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆಯು ಜ.19ರಂದು ಶ್ರೀರಾಮ ಸೇವಾ ಮಂದಿರದಲ್ಲಿ ನಡೆಯಿತು.

ಕೊಕ್ಕಡ ಪ್ರಾ.ಕೃ.ಪ. ಸಂಘದ ನಿಕಟಪೂರ್ವ ಉಪಾಧ್ಯಕ್ಷ ಈಶ್ವರ ಭಟ್‌ ಹಿತ್ತಿಲು ಅಧ್ಯಕ್ಷತೆಯನ್ನು ವಹಿಸಿದ್ದರು.ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಚುನಾವಣಾ ಪ್ರಭಾರಿ ಧರ್ಮಸ್ಥಳ ಪ್ರಾ.ಕೃ.ಪ. ಸಂಘದ ಅಧ್ಯಕ್ಷ ಪ್ರೀತಮ್, ಸೌತಡ್ಕ ಮಹಾಗಣಪತಿ ಸೇವಾ ಟ್ರಸ್ಟ್‌ ಅಧ್ಯಕ್ಷ ಕೃಷ್ಣ ಭಟ್, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೊಲ್ಲಾ, ಕಾರ್ಯದರ್ಶಿ ಗಣೇಶ್ ಕೆ. ಹೊಸ್ತೋಟ, ಸಹಕಾರ ಭಾರತಿ ತಾಲೂಕು ಅಧ್ಯಕ್ಷ ವೆಂಕಪ್ಪಯ್ಯ, ಕೊಕ್ಕಡ ಪಂಚಾಯತ್‌ ಅಧ್ಯಕ್ಷೆ ಬೇಬಿ, ಕೊಕ್ಕಡ ಪ್ರಾ.ಕೃ.ಪ. ಸಂಘದ ನಿಕಟ ಪೂರ್ವ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯತ್ ನಿಕಟ ಪೂರ್ವಧ್ಯಕ್ಷ ಯೋಗೀಶ್ ಆಳಂಬಿಲ, ತಾಲೂಕು ಎಸ್‌. ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಪಟ್ರಮೆ ಪಂಚಾಯತ್‌ ಅಧ್ಯಕ್ಷ ಮನೋಜ್ ಕುಮಾರ್ ಪುರಂದರ ಕಡೀರ ಮತ್ತು ಅಭ್ಯರ್ಥಿಗಳು ಉಪಸ್ಥಿತರಿದ್ದರು.

ನಾಮ ಪತ್ರಿಕೆ ಸಲ್ಲಿಕೆಯ ಅದ್ದೂರಿ ಮೆರವಣಿಗೆ: ಸಾಮಾನ್ಯ ಕ್ಷೇತ್ರದಿಂದ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿರುವ ಕುಶಾಲಪ್ಪ ಗೌಡ ಪೂವಾಜೆ, ವಿಠಲ ಬಂಡಾರಿ, ಶ್ರೀನಾಥ್ ಬಡೆ ಕೈಲು,ಪದ್ಮನಾಭ ಕಾಯಿಲ, ಉದಯ ಕುಮಾರ್ ಅನಾರು, ಮಹಾಬಲ ಶೆಟ್ಟಿ ಪಟ್ಟೂರು, ಹಿಂದುಳಿದ ವರ್ಗದ ಎ ಕ್ಷೇತ್ರದ ಅಭ್ಯರ್ಥಿ ಸುನೀಲ್ ಕೊಲ್ಲಾಜೆ, ಹಿಂದುಳಿದ ವರ್ಗ ಬಿ ಕ್ಷೇತ್ರದ ಅಭ್ಯರ್ಥಿ ರವಿಚಂದ್ರ ಪುಲ್ಕೆತ್ತೂರು, ಮಹಿಳಾ ಕ್ಷೇತ್ರದ ಅಭ್ಯರ್ಥಿಗಳಾದ ಪ್ರೇಮವತಿ ಕಲ್ಲಾಜೆ, ಅಶ್ವಿನಿ ರವಿ ನಾಯ್ಕ ಓಣಿತ್ತಾರು, ಪರಿಶಿಷ್ಟ ಜಾತಿ ಅಭ್ಯರ್ಥಿ ಮುತ್ತಪ್ಪ ಕೊಕ್ಕಡ, ಪರಿಶಿಷ್ಟ ಪಂಗಡ ಅಭ್ಯರ್ಥಿ ವಿಶ್ವನಾಥ್ ಕುಕ್ಕುದೋಲಿ ಇವರೆಲ್ಲರೂ ಅದ್ದೂರಿ ಮೆರವಣಿಗೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ಯೋಗೀಶ್ ಆಳಂಬಿಲ ನಿರೂಪಿಸಿದರು. ಕುಶಾಲಪ್ಪ ಗೌಡ ಪೂವಾಜೆ ಸ್ವಾಗತಿಸಿದರು. ಪಂಚಾಯತ್‌ ಸದಸ್ಯೆ ಲತಾ ವಂದಿಸಿದರು.

Related posts

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya

ನಾಳೆ(ಮಾ.8): ಉಜಿರೆ ಪುರದೊಡೆಯ ಶ್ರೀ ಜನಾರ್ದನ ದೇವರಿಗೆ ನೂತನ ಬ್ರಹ್ಮರಥ, ಪುಷ್ಪರಥ ಸಮರ್ಪಣೆ:

Suddi Udaya
error: Content is protected !!