25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

ಮುಂಡಾಜೆ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ.

ಸಾಲೇತರ ಪಕ್ಷೇತರ ಅಭ್ಯರ್ಥಿ 1ಸ್ಥಾನ ಪಡೆದುಕೊಂಡಿದ್ದಾರೆ.

ಭಾರಿ ಕುತೂಹಲ ಕೆರಳಿಸಿದ ಮುಂಡಾಜೆ ಸಿಎ ಬ್ಯಾಂಕಿನ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಕಜೆ ವೆಂಕಟೇಶ್ವರ ಭಟ್,ಪ್ರಕಾಶ ನಾರಾಯಣ ರಾವ್,ರವಿ ಪೂಜಾರಿ, ರಾಘವ ಗೌಡ ಕುಡುಮಡ್ಕ,ಅಜಯ್ ಕಲ್ಲಿಕಾಟ್ ಆ್ಯಂಟನಿ,ಅಶ್ವಿನಿ ಹೆಬ್ಬಾರ್,ಮೋಹಿನಿ,ಎಂ.ಶಶಿಧರ ಕಲ್ಮಂಜ,ಶಿವಪ್ರಸಾದ್ ಗೌಡ ದೇವಸ್ಯ,ರಾಘವ ಕಲ್ಮಂಜ,ಚೆನ್ನಕೇಶವ ಅರಸಮಜಲು ಜಯಗಳಿಸಿದರು. ಹಾಗೂ ಸಾಲೇತರ ಪಕ್ಷೇತರ ಅಭ್ಯರ್ಥಿ ಸುಮಾ ಎಂ ಗೋಖಲೆ ವಿಜಯಿಯಾದರು.

ಜ. 19 ರಂದು ಚುನಾವಣೆ ನಡೆದಿದ್ದು ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ.ವಿ ಸಹಕರಿಸಿದರು.ಮುಂಡಾಜೆ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya
error: Content is protected !!