July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

ಮುಂಡಾಜೆ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ.

ಸಾಲೇತರ ಪಕ್ಷೇತರ ಅಭ್ಯರ್ಥಿ 1ಸ್ಥಾನ ಪಡೆದುಕೊಂಡಿದ್ದಾರೆ.

ಭಾರಿ ಕುತೂಹಲ ಕೆರಳಿಸಿದ ಮುಂಡಾಜೆ ಸಿಎ ಬ್ಯಾಂಕಿನ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಕಜೆ ವೆಂಕಟೇಶ್ವರ ಭಟ್,ಪ್ರಕಾಶ ನಾರಾಯಣ ರಾವ್,ರವಿ ಪೂಜಾರಿ, ರಾಘವ ಗೌಡ ಕುಡುಮಡ್ಕ,ಅಜಯ್ ಕಲ್ಲಿಕಾಟ್ ಆ್ಯಂಟನಿ,ಅಶ್ವಿನಿ ಹೆಬ್ಬಾರ್,ಮೋಹಿನಿ,ಎಂ.ಶಶಿಧರ ಕಲ್ಮಂಜ,ಶಿವಪ್ರಸಾದ್ ಗೌಡ ದೇವಸ್ಯ,ರಾಘವ ಕಲ್ಮಂಜ,ಚೆನ್ನಕೇಶವ ಅರಸಮಜಲು ಜಯಗಳಿಸಿದರು. ಹಾಗೂ ಸಾಲೇತರ ಪಕ್ಷೇತರ ಅಭ್ಯರ್ಥಿ ಸುಮಾ ಎಂ ಗೋಖಲೆ ವಿಜಯಿಯಾದರು.

ಜ. 19 ರಂದು ಚುನಾವಣೆ ನಡೆದಿದ್ದು ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ.ವಿ ಸಹಕರಿಸಿದರು.ಮುಂಡಾಜೆ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya
error: Content is protected !!