23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

ಮುಂಡಾಜೆ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ.

ಸಾಲೇತರ ಪಕ್ಷೇತರ ಅಭ್ಯರ್ಥಿ 1ಸ್ಥಾನ ಪಡೆದುಕೊಂಡಿದ್ದಾರೆ.

ಭಾರಿ ಕುತೂಹಲ ಕೆರಳಿಸಿದ ಮುಂಡಾಜೆ ಸಿಎ ಬ್ಯಾಂಕಿನ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಕಜೆ ವೆಂಕಟೇಶ್ವರ ಭಟ್,ಪ್ರಕಾಶ ನಾರಾಯಣ ರಾವ್,ರವಿ ಪೂಜಾರಿ, ರಾಘವ ಗೌಡ ಕುಡುಮಡ್ಕ,ಅಜಯ್ ಕಲ್ಲಿಕಾಟ್ ಆ್ಯಂಟನಿ,ಅಶ್ವಿನಿ ಹೆಬ್ಬಾರ್,ಮೋಹಿನಿ,ಎಂ.ಶಶಿಧರ ಕಲ್ಮಂಜ,ಶಿವಪ್ರಸಾದ್ ಗೌಡ ದೇವಸ್ಯ,ರಾಘವ ಕಲ್ಮಂಜ,ಚೆನ್ನಕೇಶವ ಅರಸಮಜಲು ಜಯಗಳಿಸಿದರು. ಹಾಗೂ ಸಾಲೇತರ ಪಕ್ಷೇತರ ಅಭ್ಯರ್ಥಿ ಸುಮಾ ಎಂ ಗೋಖಲೆ ವಿಜಯಿಯಾದರು.

ಜ. 19 ರಂದು ಚುನಾವಣೆ ನಡೆದಿದ್ದು ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ.ವಿ ಸಹಕರಿಸಿದರು.ಮುಂಡಾಜೆ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!