22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

ಮುಂಡಾಜೆ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ.

ಸಾಲೇತರ ಪಕ್ಷೇತರ ಅಭ್ಯರ್ಥಿ 1ಸ್ಥಾನ ಪಡೆದುಕೊಂಡಿದ್ದಾರೆ.

ಭಾರಿ ಕುತೂಹಲ ಕೆರಳಿಸಿದ ಮುಂಡಾಜೆ ಸಿಎ ಬ್ಯಾಂಕಿನ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಕಜೆ ವೆಂಕಟೇಶ್ವರ ಭಟ್,ಪ್ರಕಾಶ ನಾರಾಯಣ ರಾವ್,ರವಿ ಪೂಜಾರಿ, ರಾಘವ ಗೌಡ ಕುಡುಮಡ್ಕ,ಅಜಯ್ ಕಲ್ಲಿಕಾಟ್ ಆ್ಯಂಟನಿ,ಅಶ್ವಿನಿ ಹೆಬ್ಬಾರ್,ಮೋಹಿನಿ,ಎಂ.ಶಶಿಧರ ಕಲ್ಮಂಜ,ಶಿವಪ್ರಸಾದ್ ಗೌಡ ದೇವಸ್ಯ,ರಾಘವ ಕಲ್ಮಂಜ,ಚೆನ್ನಕೇಶವ ಅರಸಮಜಲು ಜಯಗಳಿಸಿದರು. ಹಾಗೂ ಸಾಲೇತರ ಪಕ್ಷೇತರ ಅಭ್ಯರ್ಥಿ ಸುಮಾ ಎಂ ಗೋಖಲೆ ವಿಜಯಿಯಾದರು.

ಜ. 19 ರಂದು ಚುನಾವಣೆ ನಡೆದಿದ್ದು ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ.ವಿ ಸಹಕರಿಸಿದರು.ಮುಂಡಾಜೆ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!