July 23, 2026
Uncategorized

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

ಧರ್ಮಸ್ಥಳ: ಸ್ಪೆಕ್ಟ್ರಮ್ ಧರ್ಮಸ್ಥಳ ಇವರ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ಜ.18 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಕ ನರೇಂದ್ರ, ಥೋಮಸ್, ರಮೇಶ್ ಹೆಚ್., ಗಣೇಶ್ ಭಟ್ ರವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ್ ರಾವ್, ರತ್ನಾರಾಜ್ ಜೈನ್, ಸುಧಾಕರ್ ಗೌಡ, ಪ್ರವೀಣ್ ದುರ್ಗಾ ಡೆಲಿಕೆಶಿ, ಶಂಕರ್ ಶೆಟ್ಟಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಪೃಥ್ವಿಶ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya

ಜು.17: ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!