24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

ಮುಂಡಾಜೆ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ.

ಸಾಲೇತರ ಪಕ್ಷೇತರ ಅಭ್ಯರ್ಥಿ 1ಸ್ಥಾನ ಪಡೆದುಕೊಂಡಿದ್ದಾರೆ.

ಭಾರಿ ಕುತೂಹಲ ಕೆರಳಿಸಿದ ಮುಂಡಾಜೆ ಸಿಎ ಬ್ಯಾಂಕಿನ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಕಜೆ ವೆಂಕಟೇಶ್ವರ ಭಟ್,ಪ್ರಕಾಶ ನಾರಾಯಣ ರಾವ್,ರವಿ ಪೂಜಾರಿ, ರಾಘವ ಗೌಡ ಕುಡುಮಡ್ಕ,ಅಜಯ್ ಕಲ್ಲಿಕಾಟ್ ಆ್ಯಂಟನಿ,ಅಶ್ವಿನಿ ಹೆಬ್ಬಾರ್,ಮೋಹಿನಿ,ಎಂ.ಶಶಿಧರ ಕಲ್ಮಂಜ,ಶಿವಪ್ರಸಾದ್ ಗೌಡ ದೇವಸ್ಯ,ರಾಘವ ಕಲ್ಮಂಜ,ಚೆನ್ನಕೇಶವ ಅರಸಮಜಲು ಜಯಗಳಿಸಿದರು. ಹಾಗೂ ಸಾಲೇತರ ಪಕ್ಷೇತರ ಅಭ್ಯರ್ಥಿ ಸುಮಾ ಎಂ ಗೋಖಲೆ ವಿಜಯಿಯಾದರು.

ಜ. 19 ರಂದು ಚುನಾವಣೆ ನಡೆದಿದ್ದು ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ.ವಿ ಸಹಕರಿಸಿದರು.ಮುಂಡಾಜೆ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya
error: Content is protected !!