23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ರಾಷ್ಟೀಯ ಸೇವಾ ಯೋಜನಾ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯುವ ದಿನದ ಅಂಗವಾಗಿ ಯುವಜನತೆ ಮತ್ತು ವ್ಯಕ್ತಿತ್ವ ವಿಕಸನದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜರಗಿತು.


ಮುಖ್ಯ ಅತಿಥಿಯಾಗಿ ಯುವ ವಾಗ್ಮಿ, ಸಾವಯವ ಕೃಷಿಕ ಶ್ರೀ ಶಿವಪ್ರಸಾದ್ ಮಲೆಬೆಟ್ಟು ಭಾಗವಹಿಸಿ, ವಿವೇಕಾನಂದರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಯುವ ಜನತೆ ಭವಿಷ್ಯದ ಬಗ್ಗೆ ದೇಶಪ್ರೇಮದಿಂದ ಒಗ್ಗೂಡಿ ಭವ್ಯ ಭಾರತಕ್ಕೆ ಸಹಕಾರಿಯಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಶ್ರೀಯುತ ಸಂತೋಷ ವಹಿಸಿದ್ದರು. ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿ ಶ್ರೀ ಪ್ರಕಾಶ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಶ್ರೀ ಅವನೀಶ್ ಪಿ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಧರ್ಮಸ್ಥಳದ ಕು. ಸೌಖ್ಯ ಎಸ್. ಜೈನ್ ಮಂಡಿಸಿದ ಸಂಶೋಧನಾ ಪ್ರಬಂಧಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya
error: Content is protected !!