25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ರಾಷ್ಟೀಯ ಸೇವಾ ಯೋಜನಾ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯುವ ದಿನದ ಅಂಗವಾಗಿ ಯುವಜನತೆ ಮತ್ತು ವ್ಯಕ್ತಿತ್ವ ವಿಕಸನದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜರಗಿತು.


ಮುಖ್ಯ ಅತಿಥಿಯಾಗಿ ಯುವ ವಾಗ್ಮಿ, ಸಾವಯವ ಕೃಷಿಕ ಶ್ರೀ ಶಿವಪ್ರಸಾದ್ ಮಲೆಬೆಟ್ಟು ಭಾಗವಹಿಸಿ, ವಿವೇಕಾನಂದರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಯುವ ಜನತೆ ಭವಿಷ್ಯದ ಬಗ್ಗೆ ದೇಶಪ್ರೇಮದಿಂದ ಒಗ್ಗೂಡಿ ಭವ್ಯ ಭಾರತಕ್ಕೆ ಸಹಕಾರಿಯಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಶ್ರೀಯುತ ಸಂತೋಷ ವಹಿಸಿದ್ದರು. ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿ ಶ್ರೀ ಪ್ರಕಾಶ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಶ್ರೀ ಅವನೀಶ್ ಪಿ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!