April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

ತೆಕ್ಕಾರು ಗ್ರಾಮದ ಉಪ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಜ.18 ರಂದು ಮನವಿ ಸಲ್ಲಿಸಿದರು.

ದಿನಾಂಕ 25/09/2023 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಜರಗಿದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ತೆರೆಯುವಂತೆ ಮನವಿಯನ್ನು ಸಲ್ಲಿಸಿರುತ್ತೇವೆ. ಮನವಿಗೆ ಸಚಿವರು ಮತ್ತು ಆರೋಗ್ಯ ಇಲಾಖೆಯವರು ಸ್ಪಂದಿಸಿ ಉಪ ಆರೋಗ್ಯ ಕೇಂದ್ರವನ್ನು ಮಂಜೂರುಗೊಳಿಸಿದ್ದು, ತೆಕ್ಕಾರು ಗ್ರಾಮದ ನಾಗರಿಕರ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದ್ದರು.

ಆದರೆ ಉಪ ಆರೋಗ್ಯ ಕೇಂದ್ರವನ್ನು ತೆರೆಯಲು ಸ್ವಂತ ಕಟ್ಟಡ ಇರುವುದಿಲ್ಲ ಈಗ ಬಾಡಿಗೆ ಕಟ್ಟಡದಲ್ಲಿ ಉಪ ಆರೋಗ್ಯ ಕೇಂದ್ರವನ್ನು ತೆರೆದಿರುತ್ತೇವೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 63/1ಪಿ1 ರಲ್ಲಿ 0.10 ಸೆಂಟ್ಸ್ ವಿಸ್ತೀರ್ಣ ಈಗಾಗಲೇ ಉಪ ಆರೋಗ್ಯ ಕೇಂದ್ರಕ್ಕೆ ಮಂಜೂರಾತಿಗೊಂಡು ದಾಖಲೆ ಪತ್ರಗಳು ಇರುತ್ತದೆ. ಆದ್ದರಿಂದ ಉಪ ಆರೋಗ್ಯ ಕೇಂದ್ರದ ಸ್ವಂತ ಕಟ್ಟಡ ನಿರ್ಮಿಸಲು ಅನುದಾನವನ್ನು ಮಂಜೂರುಗೊಳಿಸಬೇಕಾಗಿ ತೆಕ್ಕಾರು ಗ್ರಾಮದ ನಾಗರಿಕರ ಪರವಾಗಿ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಮನವಿ ಸಲ್ಲಿಸಿದರು.

Related posts

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya
error: Content is protected !!