July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

ತೆಕ್ಕಾರು ಗ್ರಾಮದ ಉಪ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಜ.18 ರಂದು ಮನವಿ ಸಲ್ಲಿಸಿದರು.

ದಿನಾಂಕ 25/09/2023 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಜರಗಿದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ತೆರೆಯುವಂತೆ ಮನವಿಯನ್ನು ಸಲ್ಲಿಸಿರುತ್ತೇವೆ. ಮನವಿಗೆ ಸಚಿವರು ಮತ್ತು ಆರೋಗ್ಯ ಇಲಾಖೆಯವರು ಸ್ಪಂದಿಸಿ ಉಪ ಆರೋಗ್ಯ ಕೇಂದ್ರವನ್ನು ಮಂಜೂರುಗೊಳಿಸಿದ್ದು, ತೆಕ್ಕಾರು ಗ್ರಾಮದ ನಾಗರಿಕರ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದ್ದರು.

ಆದರೆ ಉಪ ಆರೋಗ್ಯ ಕೇಂದ್ರವನ್ನು ತೆರೆಯಲು ಸ್ವಂತ ಕಟ್ಟಡ ಇರುವುದಿಲ್ಲ ಈಗ ಬಾಡಿಗೆ ಕಟ್ಟಡದಲ್ಲಿ ಉಪ ಆರೋಗ್ಯ ಕೇಂದ್ರವನ್ನು ತೆರೆದಿರುತ್ತೇವೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 63/1ಪಿ1 ರಲ್ಲಿ 0.10 ಸೆಂಟ್ಸ್ ವಿಸ್ತೀರ್ಣ ಈಗಾಗಲೇ ಉಪ ಆರೋಗ್ಯ ಕೇಂದ್ರಕ್ಕೆ ಮಂಜೂರಾತಿಗೊಂಡು ದಾಖಲೆ ಪತ್ರಗಳು ಇರುತ್ತದೆ. ಆದ್ದರಿಂದ ಉಪ ಆರೋಗ್ಯ ಕೇಂದ್ರದ ಸ್ವಂತ ಕಟ್ಟಡ ನಿರ್ಮಿಸಲು ಅನುದಾನವನ್ನು ಮಂಜೂರುಗೊಳಿಸಬೇಕಾಗಿ ತೆಕ್ಕಾರು ಗ್ರಾಮದ ನಾಗರಿಕರ ಪರವಾಗಿ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಮನವಿ ಸಲ್ಲಿಸಿದರು.

Related posts

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!