29.8 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ನಿಡ್ಲೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ರವರ ಅಧ್ಯಕ್ಷತೆಯಲ್ಲಿ ಜ.20 ರಂದು ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಪಶು ಸಂಗೋಪನೆ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ವಿಶ್ವನಾಥ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್‌ ಸದಸ್ಯ ಪ್ರವೀಣ್ ಹೆಬ್ಬಾರ್, ಶ್ರೀಮತಿ ಶೈಲಜಾ, ಮೋಹನ್ ಪೂಜಾರಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಕೆ.ಪಿ. ಕೇಶವ ಗೌಡ ನಿರೂಪಿಸಿದರು. ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ, ಜಿ.ಪಿ.ಡಿ.ಪಿ. ಬಗ್ಗೆ ಮಾಹಿತಿ ನೀಡಿದರು. ಸದಸ್ಯೆ ಶ್ರೀಮತಿ ಹೇಮಾವತಿ ಧನ್ಯವಾದವಿತ್ತರು.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya
error: Content is protected !!