24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ ಹಾಗೂ ಸ್ನಾತ್ತಕೋತ್ತರ ವಿಭಾಗವು ಮೈಸೂರಿನ ಕೆರಿಯರ್ ಸ್ಪಾರ್ಕ್ ಹಾಗೂ ವನಮಾಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ “ಕೆರಿಯರ್ ಆಪರ್ಚುನಿಟಿ ಅಂಡ್ ಜಾಬ್ ಪ್ಲೇಸ್ಮೆಂಟ್” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ| ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ಕೆರಿಯರ್ ಸ್ಪಾರ್ಕ್ ಮತ್ತು ವನಮಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಪ್ರಸಾದ್ ಎಸ್. ಎಂ. ಭಾಗವಹಿಸಿ , ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಇರುವ ಅವಕಾಶಗಳು ಅದಕ್ಕೆ ಬೇಕಾಗಿರುವ ವಿವಿಧ ಕೌಶಲ್ಯಗಳ ಬಗ್ಗೆ ತಿಳಿಸಿ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ. ಏನ್., ಪ್ರಾಧ್ಯಾಪಕರಾದ ಪ್ರೊ| ನವೀನ್ ಹಾಗೂ ಪ್ರೊ| ಮಾರುತಿ ಉಪಸ್ಥಿತರಿದ್ದರು.

ಕು| ಅಶ್ವಿತಾ ಮತ್ತು ಪ್ರಜ್ಞಾ ಪ್ರಾರ್ಥನೆ ನೆರವೇರಿಸಿದರು. ಕು| ಅನನ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಚಂದು ಲಾಯಿಲ ಹಾಗೂ ಬಿ. ರಾಮಣ್ಣ ಶೆಟ್ಟಿ ಮಾಲಾಡಿ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!