23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ ಹಾಗೂ ಸ್ನಾತ್ತಕೋತ್ತರ ವಿಭಾಗವು ಮೈಸೂರಿನ ಕೆರಿಯರ್ ಸ್ಪಾರ್ಕ್ ಹಾಗೂ ವನಮಾಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ “ಕೆರಿಯರ್ ಆಪರ್ಚುನಿಟಿ ಅಂಡ್ ಜಾಬ್ ಪ್ಲೇಸ್ಮೆಂಟ್” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ| ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ಕೆರಿಯರ್ ಸ್ಪಾರ್ಕ್ ಮತ್ತು ವನಮಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಪ್ರಸಾದ್ ಎಸ್. ಎಂ. ಭಾಗವಹಿಸಿ , ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಇರುವ ಅವಕಾಶಗಳು ಅದಕ್ಕೆ ಬೇಕಾಗಿರುವ ವಿವಿಧ ಕೌಶಲ್ಯಗಳ ಬಗ್ಗೆ ತಿಳಿಸಿ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ. ಏನ್., ಪ್ರಾಧ್ಯಾಪಕರಾದ ಪ್ರೊ| ನವೀನ್ ಹಾಗೂ ಪ್ರೊ| ಮಾರುತಿ ಉಪಸ್ಥಿತರಿದ್ದರು.

ಕು| ಅಶ್ವಿತಾ ಮತ್ತು ಪ್ರಜ್ಞಾ ಪ್ರಾರ್ಥನೆ ನೆರವೇರಿಸಿದರು. ಕು| ಅನನ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya
error: Content is protected !!