April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

ಉಜಿರೆ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳ ನೋಂದಾವಣಿ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಜ.20 ರಂದು ನಡೆಯಿತು.

ಶಿಬಿರವನ್ನು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ .ಬಿಎ ಕುಮಾರ ಹೆಗ್ಡೆ ಉದ್ಘಾಟಿಸಿ ಈ ಶಿಬಿರದ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಂಡು ಈ ಯೋಜನೆಯು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಈ ಯೋಜನೆಯಿಂದ ತಾಲೂಕಿಗೆ ಬಿಡುಗಡೆಯಾದ ಅನುದಾನದ ವಿವರವನ್ನು ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಇಲ್ಲಿಯ ಅಧಿಕಾರಿ ಶ್ರೀಮತಿ ಮಂಜುಷಾ ಪದೇಲ, ತಾಲೂಕು ಪಂಚಾಯತ್ ವ್ಯವಸ್ಥಾಪಕರು ಪ್ರಶಾಂತ್ ಡಿ ಬಳಂಜ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಶ್ರೀಮತಿ ಸೌಮ್ಯ ಲಾಯಿಲ, ಮರೀಟಾ ಪಿಂಟೋ, ಶರೀಫ್ ಸಬರಬೈಲು, ಹಕೀಮ್ ಕೊಕ್ಕಡ, ಯತೀಶ್ ಧರ್ಮಸ್ಥಳ, ಕೇಶವ ನಾಯ್ಕ ಉಪಸ್ಥಿತರಿದ್ದರು.

ತಾಲೂಕು ನೋಡಲ್ ಅಧಿಕಾರಿ ಹೇರಾಲ್ಡ್ ಸಿಕ್ವೆರಾ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು.

Related posts

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya
error: Content is protected !!