25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

ಉಜಿರೆ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳ ನೋಂದಾವಣಿ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಜ.20 ರಂದು ನಡೆಯಿತು.

ಶಿಬಿರವನ್ನು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ .ಬಿಎ ಕುಮಾರ ಹೆಗ್ಡೆ ಉದ್ಘಾಟಿಸಿ ಈ ಶಿಬಿರದ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಂಡು ಈ ಯೋಜನೆಯು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಈ ಯೋಜನೆಯಿಂದ ತಾಲೂಕಿಗೆ ಬಿಡುಗಡೆಯಾದ ಅನುದಾನದ ವಿವರವನ್ನು ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಇಲ್ಲಿಯ ಅಧಿಕಾರಿ ಶ್ರೀಮತಿ ಮಂಜುಷಾ ಪದೇಲ, ತಾಲೂಕು ಪಂಚಾಯತ್ ವ್ಯವಸ್ಥಾಪಕರು ಪ್ರಶಾಂತ್ ಡಿ ಬಳಂಜ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಶ್ರೀಮತಿ ಸೌಮ್ಯ ಲಾಯಿಲ, ಮರೀಟಾ ಪಿಂಟೋ, ಶರೀಫ್ ಸಬರಬೈಲು, ಹಕೀಮ್ ಕೊಕ್ಕಡ, ಯತೀಶ್ ಧರ್ಮಸ್ಥಳ, ಕೇಶವ ನಾಯ್ಕ ಉಪಸ್ಥಿತರಿದ್ದರು.

ತಾಲೂಕು ನೋಡಲ್ ಅಧಿಕಾರಿ ಹೇರಾಲ್ಡ್ ಸಿಕ್ವೆರಾ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು.

Related posts

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

Suddi Udaya

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya
error: Content is protected !!