23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

ಉಜಿರೆ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳ ನೋಂದಾವಣಿ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಜ.20 ರಂದು ನಡೆಯಿತು.

ಶಿಬಿರವನ್ನು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ .ಬಿಎ ಕುಮಾರ ಹೆಗ್ಡೆ ಉದ್ಘಾಟಿಸಿ ಈ ಶಿಬಿರದ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಂಡು ಈ ಯೋಜನೆಯು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಈ ಯೋಜನೆಯಿಂದ ತಾಲೂಕಿಗೆ ಬಿಡುಗಡೆಯಾದ ಅನುದಾನದ ವಿವರವನ್ನು ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಇಲ್ಲಿಯ ಅಧಿಕಾರಿ ಶ್ರೀಮತಿ ಮಂಜುಷಾ ಪದೇಲ, ತಾಲೂಕು ಪಂಚಾಯತ್ ವ್ಯವಸ್ಥಾಪಕರು ಪ್ರಶಾಂತ್ ಡಿ ಬಳಂಜ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಶ್ರೀಮತಿ ಸೌಮ್ಯ ಲಾಯಿಲ, ಮರೀಟಾ ಪಿಂಟೋ, ಶರೀಫ್ ಸಬರಬೈಲು, ಹಕೀಮ್ ಕೊಕ್ಕಡ, ಯತೀಶ್ ಧರ್ಮಸ್ಥಳ, ಕೇಶವ ನಾಯ್ಕ ಉಪಸ್ಥಿತರಿದ್ದರು.

ತಾಲೂಕು ನೋಡಲ್ ಅಧಿಕಾರಿ ಹೇರಾಲ್ಡ್ ಸಿಕ್ವೆರಾ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು.

Related posts

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya
error: Content is protected !!