22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

ಉಜಿರೆ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳ ನೋಂದಾವಣಿ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಜ.20 ರಂದು ನಡೆಯಿತು.

ಶಿಬಿರವನ್ನು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ .ಬಿಎ ಕುಮಾರ ಹೆಗ್ಡೆ ಉದ್ಘಾಟಿಸಿ ಈ ಶಿಬಿರದ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಂಡು ಈ ಯೋಜನೆಯು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಈ ಯೋಜನೆಯಿಂದ ತಾಲೂಕಿಗೆ ಬಿಡುಗಡೆಯಾದ ಅನುದಾನದ ವಿವರವನ್ನು ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಇಲ್ಲಿಯ ಅಧಿಕಾರಿ ಶ್ರೀಮತಿ ಮಂಜುಷಾ ಪದೇಲ, ತಾಲೂಕು ಪಂಚಾಯತ್ ವ್ಯವಸ್ಥಾಪಕರು ಪ್ರಶಾಂತ್ ಡಿ ಬಳಂಜ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಶ್ರೀಮತಿ ಸೌಮ್ಯ ಲಾಯಿಲ, ಮರೀಟಾ ಪಿಂಟೋ, ಶರೀಫ್ ಸಬರಬೈಲು, ಹಕೀಮ್ ಕೊಕ್ಕಡ, ಯತೀಶ್ ಧರ್ಮಸ್ಥಳ, ಕೇಶವ ನಾಯ್ಕ ಉಪಸ್ಥಿತರಿದ್ದರು.

ತಾಲೂಕು ನೋಡಲ್ ಅಧಿಕಾರಿ ಹೇರಾಲ್ಡ್ ಸಿಕ್ವೆರಾ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya
error: Content is protected !!