July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ರಾಷ್ಟೀಯ ಸೇವಾ ಯೋಜನಾ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯುವ ದಿನದ ಅಂಗವಾಗಿ ಯುವಜನತೆ ಮತ್ತು ವ್ಯಕ್ತಿತ್ವ ವಿಕಸನದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜರಗಿತು.


ಮುಖ್ಯ ಅತಿಥಿಯಾಗಿ ಯುವ ವಾಗ್ಮಿ, ಸಾವಯವ ಕೃಷಿಕ ಶ್ರೀ ಶಿವಪ್ರಸಾದ್ ಮಲೆಬೆಟ್ಟು ಭಾಗವಹಿಸಿ, ವಿವೇಕಾನಂದರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಯುವ ಜನತೆ ಭವಿಷ್ಯದ ಬಗ್ಗೆ ದೇಶಪ್ರೇಮದಿಂದ ಒಗ್ಗೂಡಿ ಭವ್ಯ ಭಾರತಕ್ಕೆ ಸಹಕಾರಿಯಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಶ್ರೀಯುತ ಸಂತೋಷ ವಹಿಸಿದ್ದರು. ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿ ಶ್ರೀ ಪ್ರಕಾಶ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಶ್ರೀ ಅವನೀಶ್ ಪಿ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ನಾರಾವಿ ಉದ್ಯಮಿ ಸುಂದರ ಕೋಟ್ಯಾನ್ ನಿಧನ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya
error: Content is protected !!