Uncategorized

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ.ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ.ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿರುವ ಸಂಭವವಿದೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ದಕ ಜಿಲ್ಲಾ ವಿಭಾಗದ ಘಾಟಿ ಪ್ರದೇಶ ಈ ಸ್ಥಳಕ್ಕೆ ಹತ್ತಿರವಿದ್ದು ಅಲ್ಲಿಗೂ ಬೆಂಕಿ ವ್ಯಾಪಿಸುವ ಭೀತಿ ಇದೆ.ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ ಬೇಸಿಗೆಯಲ್ಲಿ ಪ್ರತಿ ವರ್ಷ ಬೆಂಕಿ ಅನಾಹುತ ಉಂಟಾಗುತ್ತಿದ್ದು ಹಲವು ಎಕರೆ ಪ್ರದೇಶ ನಾಶವಾಗುತ್ತಿದೆ.

Related posts

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಲಾಯಿಲ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya
error: Content is protected !!