23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

ತೆಕ್ಕಾರು ಗ್ರಾಮದ ಉಪ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಜ.18 ರಂದು ಮನವಿ ಸಲ್ಲಿಸಿದರು.

ದಿನಾಂಕ 25/09/2023 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಜರಗಿದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ತೆರೆಯುವಂತೆ ಮನವಿಯನ್ನು ಸಲ್ಲಿಸಿರುತ್ತೇವೆ. ಮನವಿಗೆ ಸಚಿವರು ಮತ್ತು ಆರೋಗ್ಯ ಇಲಾಖೆಯವರು ಸ್ಪಂದಿಸಿ ಉಪ ಆರೋಗ್ಯ ಕೇಂದ್ರವನ್ನು ಮಂಜೂರುಗೊಳಿಸಿದ್ದು, ತೆಕ್ಕಾರು ಗ್ರಾಮದ ನಾಗರಿಕರ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದ್ದರು.

ಆದರೆ ಉಪ ಆರೋಗ್ಯ ಕೇಂದ್ರವನ್ನು ತೆರೆಯಲು ಸ್ವಂತ ಕಟ್ಟಡ ಇರುವುದಿಲ್ಲ ಈಗ ಬಾಡಿಗೆ ಕಟ್ಟಡದಲ್ಲಿ ಉಪ ಆರೋಗ್ಯ ಕೇಂದ್ರವನ್ನು ತೆರೆದಿರುತ್ತೇವೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 63/1ಪಿ1 ರಲ್ಲಿ 0.10 ಸೆಂಟ್ಸ್ ವಿಸ್ತೀರ್ಣ ಈಗಾಗಲೇ ಉಪ ಆರೋಗ್ಯ ಕೇಂದ್ರಕ್ಕೆ ಮಂಜೂರಾತಿಗೊಂಡು ದಾಖಲೆ ಪತ್ರಗಳು ಇರುತ್ತದೆ. ಆದ್ದರಿಂದ ಉಪ ಆರೋಗ್ಯ ಕೇಂದ್ರದ ಸ್ವಂತ ಕಟ್ಟಡ ನಿರ್ಮಿಸಲು ಅನುದಾನವನ್ನು ಮಂಜೂರುಗೊಳಿಸಬೇಕಾಗಿ ತೆಕ್ಕಾರು ಗ್ರಾಮದ ನಾಗರಿಕರ ಪರವಾಗಿ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಮನವಿ ಸಲ್ಲಿಸಿದರು.

Related posts

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya
error: Content is protected !!