22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

ತೆಕ್ಕಾರು ಗ್ರಾಮದ ಉಪ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಜ.18 ರಂದು ಮನವಿ ಸಲ್ಲಿಸಿದರು.

ದಿನಾಂಕ 25/09/2023 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಜರಗಿದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ತೆರೆಯುವಂತೆ ಮನವಿಯನ್ನು ಸಲ್ಲಿಸಿರುತ್ತೇವೆ. ಮನವಿಗೆ ಸಚಿವರು ಮತ್ತು ಆರೋಗ್ಯ ಇಲಾಖೆಯವರು ಸ್ಪಂದಿಸಿ ಉಪ ಆರೋಗ್ಯ ಕೇಂದ್ರವನ್ನು ಮಂಜೂರುಗೊಳಿಸಿದ್ದು, ತೆಕ್ಕಾರು ಗ್ರಾಮದ ನಾಗರಿಕರ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದ್ದರು.

ಆದರೆ ಉಪ ಆರೋಗ್ಯ ಕೇಂದ್ರವನ್ನು ತೆರೆಯಲು ಸ್ವಂತ ಕಟ್ಟಡ ಇರುವುದಿಲ್ಲ ಈಗ ಬಾಡಿಗೆ ಕಟ್ಟಡದಲ್ಲಿ ಉಪ ಆರೋಗ್ಯ ಕೇಂದ್ರವನ್ನು ತೆರೆದಿರುತ್ತೇವೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 63/1ಪಿ1 ರಲ್ಲಿ 0.10 ಸೆಂಟ್ಸ್ ವಿಸ್ತೀರ್ಣ ಈಗಾಗಲೇ ಉಪ ಆರೋಗ್ಯ ಕೇಂದ್ರಕ್ಕೆ ಮಂಜೂರಾತಿಗೊಂಡು ದಾಖಲೆ ಪತ್ರಗಳು ಇರುತ್ತದೆ. ಆದ್ದರಿಂದ ಉಪ ಆರೋಗ್ಯ ಕೇಂದ್ರದ ಸ್ವಂತ ಕಟ್ಟಡ ನಿರ್ಮಿಸಲು ಅನುದಾನವನ್ನು ಮಂಜೂರುಗೊಳಿಸಬೇಕಾಗಿ ತೆಕ್ಕಾರು ಗ್ರಾಮದ ನಾಗರಿಕರ ಪರವಾಗಿ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಮನವಿ ಸಲ್ಲಿಸಿದರು.

Related posts

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya
error: Content is protected !!