23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

ತೆಕ್ಕಾರು ಗ್ರಾಮದ ಉಪ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಜ.18 ರಂದು ಮನವಿ ಸಲ್ಲಿಸಿದರು.

ದಿನಾಂಕ 25/09/2023 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಜರಗಿದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ತೆರೆಯುವಂತೆ ಮನವಿಯನ್ನು ಸಲ್ಲಿಸಿರುತ್ತೇವೆ. ಮನವಿಗೆ ಸಚಿವರು ಮತ್ತು ಆರೋಗ್ಯ ಇಲಾಖೆಯವರು ಸ್ಪಂದಿಸಿ ಉಪ ಆರೋಗ್ಯ ಕೇಂದ್ರವನ್ನು ಮಂಜೂರುಗೊಳಿಸಿದ್ದು, ತೆಕ್ಕಾರು ಗ್ರಾಮದ ನಾಗರಿಕರ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದ್ದರು.

ಆದರೆ ಉಪ ಆರೋಗ್ಯ ಕೇಂದ್ರವನ್ನು ತೆರೆಯಲು ಸ್ವಂತ ಕಟ್ಟಡ ಇರುವುದಿಲ್ಲ ಈಗ ಬಾಡಿಗೆ ಕಟ್ಟಡದಲ್ಲಿ ಉಪ ಆರೋಗ್ಯ ಕೇಂದ್ರವನ್ನು ತೆರೆದಿರುತ್ತೇವೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 63/1ಪಿ1 ರಲ್ಲಿ 0.10 ಸೆಂಟ್ಸ್ ವಿಸ್ತೀರ್ಣ ಈಗಾಗಲೇ ಉಪ ಆರೋಗ್ಯ ಕೇಂದ್ರಕ್ಕೆ ಮಂಜೂರಾತಿಗೊಂಡು ದಾಖಲೆ ಪತ್ರಗಳು ಇರುತ್ತದೆ. ಆದ್ದರಿಂದ ಉಪ ಆರೋಗ್ಯ ಕೇಂದ್ರದ ಸ್ವಂತ ಕಟ್ಟಡ ನಿರ್ಮಿಸಲು ಅನುದಾನವನ್ನು ಮಂಜೂರುಗೊಳಿಸಬೇಕಾಗಿ ತೆಕ್ಕಾರು ಗ್ರಾಮದ ನಾಗರಿಕರ ಪರವಾಗಿ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಮನವಿ ಸಲ್ಲಿಸಿದರು.

Related posts

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಎಸ್‌ಎಸ್‌ಎಲ್‌ಸಿ ಶತಪ್ರತಿಶತ ಸಾಧನೆ ಮಾಡಿದ ಪ್ರಾಪ್ತಿ ಎಂ. ಗೌಡರಿಗೆ ಸನ್ಮಾನ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya
error: Content is protected !!