32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ನಿಡ್ಲೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ರವರ ಅಧ್ಯಕ್ಷತೆಯಲ್ಲಿ ಜ.20 ರಂದು ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಪಶು ಸಂಗೋಪನೆ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ವಿಶ್ವನಾಥ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್‌ ಸದಸ್ಯ ಪ್ರವೀಣ್ ಹೆಬ್ಬಾರ್, ಶ್ರೀಮತಿ ಶೈಲಜಾ, ಮೋಹನ್ ಪೂಜಾರಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಕೆ.ಪಿ. ಕೇಶವ ಗೌಡ ನಿರೂಪಿಸಿದರು. ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ, ಜಿ.ಪಿ.ಡಿ.ಪಿ. ಬಗ್ಗೆ ಮಾಹಿತಿ ನೀಡಿದರು. ಸದಸ್ಯೆ ಶ್ರೀಮತಿ ಹೇಮಾವತಿ ಧನ್ಯವಾದವಿತ್ತರು.

Related posts

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

Suddi Udaya

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya
error: Content is protected !!