April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ ಹಾಗೂ ಸ್ನಾತ್ತಕೋತ್ತರ ವಿಭಾಗವು ಮೈಸೂರಿನ ಕೆರಿಯರ್ ಸ್ಪಾರ್ಕ್ ಹಾಗೂ ವನಮಾಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ “ಕೆರಿಯರ್ ಆಪರ್ಚುನಿಟಿ ಅಂಡ್ ಜಾಬ್ ಪ್ಲೇಸ್ಮೆಂಟ್” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ| ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ಕೆರಿಯರ್ ಸ್ಪಾರ್ಕ್ ಮತ್ತು ವನಮಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಪ್ರಸಾದ್ ಎಸ್. ಎಂ. ಭಾಗವಹಿಸಿ , ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಇರುವ ಅವಕಾಶಗಳು ಅದಕ್ಕೆ ಬೇಕಾಗಿರುವ ವಿವಿಧ ಕೌಶಲ್ಯಗಳ ಬಗ್ಗೆ ತಿಳಿಸಿ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ. ಏನ್., ಪ್ರಾಧ್ಯಾಪಕರಾದ ಪ್ರೊ| ನವೀನ್ ಹಾಗೂ ಪ್ರೊ| ಮಾರುತಿ ಉಪಸ್ಥಿತರಿದ್ದರು.

ಕು| ಅಶ್ವಿತಾ ಮತ್ತು ಪ್ರಜ್ಞಾ ಪ್ರಾರ್ಥನೆ ನೆರವೇರಿಸಿದರು. ಕು| ಅನನ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya
error: Content is protected !!