ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ ಹಾಗೂ ಸ್ನಾತ್ತಕೋತ್ತರ ವಿಭಾಗವು ಮೈಸೂರಿನ ಕೆರಿಯರ್ ಸ್ಪಾರ್ಕ್ ಹಾಗೂ ವನಮಾಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ “ಕೆರಿಯರ್ ಆಪರ್ಚುನಿಟಿ ಅಂಡ್ ಜಾಬ್ ಪ್ಲೇಸ್ಮೆಂಟ್” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ| ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ಕೆರಿಯರ್ ಸ್ಪಾರ್ಕ್ ಮತ್ತು ವನಮಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಪ್ರಸಾದ್ ಎಸ್. ಎಂ. ಭಾಗವಹಿಸಿ , ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಇರುವ ಅವಕಾಶಗಳು ಅದಕ್ಕೆ ಬೇಕಾಗಿರುವ ವಿವಿಧ ಕೌಶಲ್ಯಗಳ ಬಗ್ಗೆ ತಿಳಿಸಿ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ. ಏನ್., ಪ್ರಾಧ್ಯಾಪಕರಾದ ಪ್ರೊ| ನವೀನ್ ಹಾಗೂ ಪ್ರೊ| ಮಾರುತಿ ಉಪಸ್ಥಿತರಿದ್ದರು.

ಕು| ಅಶ್ವಿತಾ ಮತ್ತು ಪ್ರಜ್ಞಾ ಪ್ರಾರ್ಥನೆ ನೆರವೇರಿಸಿದರು. ಕು| ಅನನ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಹೊರಂಗಣ ಜಲಾವೃತ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಆಟಿಡೊಂಜಿ ಕೂಟ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!