24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

ಗುರುವಾಯನಕೆರೆ: ನಮ್ಮ ಮನೆ ಹವ್ಯಕ ಭವನದಲ್ಲಿ ಅ.ಭಾ ಸಾ.ಪ . ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾದ ಗಣಪತಿ ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯವು ಜ.19ರಂದು ನಡೆಯಿತು.

ಕಾರ್ಯಕ್ರಮಕ್ಕೆ ಹವ್ಯಕ ಭವನದ ಕ್ರಿಯಾ ಸಮಿತಿಯ ಕಾರ್ಯದರ್ಶಿ ವೆಂಕಪ್ಪಯ್ಯ ದೀಪ ಪ್ರಜ್ವಲಿಸಿ, ಶಾರದಾ ಮಾತೆ ಮತ್ತು ಭಾರತಾಂಬೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಗೈಯುವುದರ ಮೂಲಕ ಚಾಲನೆಯನ್ನು ನೀಡಿ ಶುಭ ಹಾರೈಸಿದರು.
ಅತಿಥಿಗಳಾದ ವೆಂಕಪ್ಪಯ್ಯ ಇವರನ್ನು ಪ್ರೊ. ಗಣಪತಿ ಕುಳಮರ್ವ ಇವರು ಮತ್ತು ಸಂಪನ್ಮೂಲ ವ್ಯಕ್ತಿ ಡಾ. ಶ್ರೀಧರ್ ಭಟ್ ಇವರನ್ನು ಶ್ರೀಮತಿ ಸುಭಾಷಿಣಿ ಇವರು ತಾಂಬೂಲ ನೀಡಿ ಗೌರವಿಸಿದರು.

ಸಮಿತಿಯ ಸದಸ್ಯೆ ಶ್ರೀಮತಿ ಸಂತೋಷಿನಿ ಇವರು ಶಾರದೆಯನ್ನು ಸ್ತುತಿಸಿದರು. ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿಯವರ ರಚನೆಯ ಆಶಯಗೀತೆಯನ್ನು ಶ್ರೀಮತಿ ಅಶ್ವಿಜ ಶ್ರೀಧರ್ ಇವರು ರಾಗ ಸಂಯೋಜಿಸಿ ಸುಶ್ರಾವ್ಯವಾಗಿ ಹಾಡಿದರು.
ಡಾ. ಶ್ರೀಧರ ಭಟ್ ಇವರು ಗೀತೆಯ ಸ್ವರೂಪ,ಸಾರ, ಅದು ಸಾಹಿತ್ಯಕ್ಕೆ ಹೇಗೆ ಆಧಾರಶಿಲೆಯಾಗಿದೆ ಎನ್ನುವುದನ್ನು ಮಾತನಾಡಿ, ಜೀವನ ಪದ್ಧತಿಯನ್ನು ತಿಳಿಸುವ ಗೀತೆಯ ಸಾರದಂತೆ ಜೀವನದ ಯಾವುದೇ ಕ್ಲಿಷ್ಟಕರ ಸನ್ನಿವೇಶದಲ್ಲಿ ಪಲಾಯನ ಮಾಡದೆ, ಯಾವುದೇ ಬಂಧಗಳಿಗೆ ಅಂಟಿಕೊಳ್ಳದೆ ಧೈರ್ಯದಿಂದ ಎದುರಿಸಬೇಕು ಎಂದು ಉದಾಹರಣೆಗಳೊಂದಿಗೆ ಬಹಳ ಮನೋಜ್ಞವಾಗಿ ತಿಳಿಸಿದರು.


ಕಾರ್ಯಕ್ರಮದ ಅತಿಥಿಗಳಾದ ವೆಂಕಪ್ಪಯ್ಯ ಇವರಿಗೆ ಹಿರಿಯರಾದ ಗೋಪಾಲಕೃಷ್ಣರಾವ್ ಅಡೂರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಡಾ. ಶ್ರೀಧರ್ ಭಟ್ ಇವರಿಗೆ ವೇದವ್ಯಾಸ ಶಿಶು ಮಂದಿರದ ಅಧ್ಯಕ್ಷರಾದ ಶ್ರೀಮತಿ ಇಂದುಮತಿ ಇವರು ಪುಸ್ತಕ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.

ಮಕ್ಕಳ ಪ್ರಕಾರದ ಪ್ರಮುಖ್ ಶ್ರೀಮತಿ ಮೇಧ ಕಾರ್ಯಕ್ರಮವನ್ನು ನಿರೂಪಿಸಿ, ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿ ಧನ್ಯವಾದವನ್ನಿತ್ತರು. ಕಾರ್ಯಕ್ರಮದಲ್ಲಿ ಸಮಿತಿಯ ಪದಾಧಿಕಾರಿಗಳು, ಪ್ರಕಾರ ಪ್ರಮುಖರು ಮತ್ತು ಸದಸ್ಯರು, ನಮ್ಮ ಮನೆ ಹವ್ಯಕ ಭವನ ಕ್ರಿಯಾ ಸಮಿತಿಯ ಸದಸ್ಯರು, ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸದಸ್ಯರು, ಸ್ಥಳೀಯ ಭಜನಾ ಮಂಡಲದ ಪದಾಧಿಕಾರಿಗಳು ಸದಸ್ಯರು, ವೇದವ್ಯಾಸ ಶಿಶುಮಂದಿರದ ಪದಾಧಿಕಾರಿಗಳು, ಹಾಗೂ ಊರಿನ ಮಹನೀಯರು ಮತ್ತು ಮಹಿಳೆಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಪ್ರಥಮ ಅಧ್ಯಾಯದ ಪ್ರಯೋಜನವನ್ನು ಪಡೆದುಕೊಂಡರು.

Related posts

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya
error: Content is protected !!